ಚಿಕ್ಕಬಳ್ಳಾಪುರ: ‘ಸದ್ಯ ಬೇರೆಯವರು ಮುಖ್ಯಮಂತ್ರಿಯಾಗಲು ಐದು ವರ್ಷಗಳ ವರೆಗೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ನಾವು ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಬೇಕು ಎಂದು ಈಗಾಗಲೇ ಹೇಳಿಯಾಗಿದೆ. ಆ ಚರ್ಚೆಯೇ ಅಪ್ರಸ್ತುತ’ ಎಂದು ಸಂಸದ ವೀರಪ್ಪ ಮೊಯಿಲಿ ಹೇಳಿದರು.
ತಾಲ್ಲೂಕಿನ ನಂದಿಬೆಟ್ಟದಲ್ಲಿ ಶನಿವಾರ ಆಯೋಜಿಸಿದ್ದ ‘ನಂದಿಸಂತೆ’ಗೆ ಚಾಲನೆ ನೀಡಿದ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
‘ಚಿಕ್ಕಬಳ್ಳಾಪುರದ ಜನ ನನಗೆ ಎರಡು ಬಾರಿ ಆಶೀರ್ವಾದ ಮಾಡಿದ್ದಾರೆ. ಮೂರನೇ ಬಾರಿ ಸಹ ನಾನು ಇಲ್ಲಿಯೇ ಸ್ಪರ್ಧೆ ಮಾಡುತ್ತೇನೆ. ರಾಜ್ಯದಲ್ಲಿ 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನವರು ಒಂಬತ್ತು ಕ್ಷೇತ್ರಗಳಲ್ಲಿ ಗೆದ್ದಿದ್ದೇವೆ. ಈ ಬಾರಿಯೂ ನಾವು ಆ ಕ್ಷೇತ್ರಗಳನ್ನು ಬಿಟ್ಟು ಕೊಡುವುದಿಲ್ಲ. ಉಳಿದ ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಯಬೇಕಿದೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.