ಚಿಂತಾಮಣಿ: ನಗರದ ಹೊರವಲಯದ ಕರಿಯಪ್ಪಲ್ಲಿ ಗ್ರಾಮದ ಅಗ್ನಿಶಾಮಕ ದಳದ ಕಟ್ಟಡದ ಹಿಂಭಾಗದಲ್ಲಿ ಜೂಜಾಟದಲ್ಲಿ ನಿರತವಾಗಿದ್ದ ಗುಂಪಿನ ಮೇಲೆ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ.
ಕರಿಯಪ್ಪಲ್ಲಿ ಗ್ರಾಮದ ಪ್ರಸಾದ್ ಕುಮಾರ್, ನವೀನ್, ನರಸಿಂಹ ಬಂಧಿತ ಆರೋಪಿಗಳು. ಬಂಧಿತರಿಂದ ₹3,010 ಹಾಗೂ ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಸಬ್ ಇನ್ಸ್ಪೆಕ್ಟರ್ ರವಣಮ್ಮ, ಎಎಸ್ಐ ಇಮ್ತಿಯಾಜ್, ಸಿಬ್ಬಂದಿ ಲೋಕೇಶ್, ಚೆನ್ನಕೇಶವ ದಾಳಿಯ ತಂಡದಲ್ಲಿದ್ದರು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.