ADVERTISEMENT

ಚಿಕ್ಕಬಳ್ಳಾಪುರ: ಸೇತುವೆಗೆ ಕಾರು ಡಿಕ್ಕಿಯಾಗಿ ಮೂವರು ಸಾವು

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2022, 4:57 IST
Last Updated 23 ಏಪ್ರಿಲ್ 2022, 4:57 IST
ಸೇತುವೆಗೆ ಡಿಕ್ಕಿಯಾದ ಕಾರು
ಸೇತುವೆಗೆ ಡಿಕ್ಕಿಯಾದ ಕಾರು   

ಚಿಕ್ಕಬಳ್ಳಾಪುರ: ತಾಲ್ಲೂಕಿನ ಜಾತವಾರ ಹೊಸಹಳ್ಳಿ ಬಳಿ ಶುಕ್ರವಾರ ರಾತ್ರಿ ಕಾರು ಸೇತುವೆಗೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಗುಡಿಬಂಡೆ ತಾಲ್ಲೂಕಿನ ಸೋಮೇನಹಳ್ಳಿಯ ಲಕ್ಷ್ಮಿ, ಬೆಂಗಳೂರಿನ ಕೆ.ಆರ್.ಪುರಂನ ಅರುಣ್, ಶಿವಕುಮಾರ್ ಮೃತರು. ಚಂದ್ರಶೇಖರ್ ಎಂಬುವವರು ಗಾಯಗೊಂಡಿದ್ದಾರೆ.

ಕಾರಿನಲ್ಲಿ ಚಿಕ್ಕಬಳ್ಳಾಪುರದಿಂದ ಚಿಂತಾಮಣಿಯತ್ತ ಇವರು ತೆರಳುತಿದ್ದರು. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.