ಬಾಗೇಪಲ್ಲಿ: ಆರೋಗ್ಯ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ವೈದ್ಯಕೀಯ ಇಲಾಖೆ ನೌಕರರಿಗೆ ಸಮಾನ ವೇತನ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜೂನ್ 4ರಿಂದ ಮುಷ್ಕರ ನಡೆಸಲಾಗುವುದು ಎಂದು ನೌಕರರ ಸಂಘ ತಿಳಿಸಿದೆ.
ಜೀವವಿಮೆ ಸೇರಿ 14 ಬೇಡಿಕೆಗಳನ್ನಿಟ್ಟು ನೌಕರರು ಆರೋಗ್ಯ ಸೇವೆಯ ಕರ್ತವ್ಯ ನಿರ್ವಹಿಸದೇ ಬೀದಿಗಿಳಿದು ಮುಷ್ಕರ ನಡೆಸಲಿದ್ದಾರೆ. ಇದರಿಂದ ಆರೋಗ್ಯ ಸೇವೆ ಸ್ತಬ್ಧವಾಗಲಿದೆ. ಹೊರ, ಒಳ ರೋಗಿಗಳಿಗೆ ತೊಂದರೆ ಆಗಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.