ADVERTISEMENT

ಟ್ರ್ಯಾಕ್ಟರ್ ಡಿಕ್ಕಿ: ಬೈಕ್ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 19 ಜನವರಿ 2023, 4:50 IST
Last Updated 19 ಜನವರಿ 2023, 4:50 IST

ಚಿಂತಾಮಣಿ: ತಾಲ್ಲೂಕಿನ ಮುಷ್ಟೂರು ಪಟ್ಟಣ ಗ್ರಾಮದ ಬಳಿ ಮಂಗಳವಾರ ರಾತ್ರಿ ದ್ವಿಚಕ್ರವಾಹನಕ್ಕೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿದ್ದಾನೆ.

ಗ್ರಾಮದ ಸುಧಾಕರ್ ಎಂಬುವವರ ಮಗ ಕೆ.ಎಸ್. ಪ್ರಶಾಂತ್(21) ಮೃತ ಯುವಕ. ನಗರದ ಕಾಲೇಜು ಒಂದರಲ್ಲಿ ದ್ವಿತೀಯ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದ. ಮಂಗಳವಾರ ರಾತ್ರಿ ತಮ್ಮ ಮನೆಯ ಹಾಲನ್ನು ಪಕ್ಕದ ಗ್ರಾಮದಲ್ಲಿರುವ ಯನಮಲಪಾಡಿ ಡೇರಿಗೆ ಕೊಡಲು ಹೋಗಿದ್ದ. ಹಾಲು ಹಾಕಿ ವಾಪಸ್ ಗ್ರಾಮಕ್ಕೆ ಬರುತ್ತಿರುವಾಗ ರಸ್ತೆ ಅಪಘಾತ ಸಂಭವಿಸಿದೆ.

ಗ್ರಾಮದ ಬಳಿ ಬರುತ್ತಿರುವಾಗ ಅದೇ ಗ್ರಾಮದ ಮಂಜುನಾಥ್ ಎಂಬುವರ ನೋಂದಣಿ ಸಂಖ್ಯೆ ಇಲ್ಲದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದೆ. ಅತಿವೇಗ ಮತ್ತು ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ. ಈ ಘಟನೆ ಸಂಭವಿಸಿದ ಬಳಿಕ ಟ್ರ್ಯಾಕ್ಟರ್ ಅನ್ನು ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

ADVERTISEMENT

ಈ ಸಂಬಂಧ ಮೃತನ ತಂದೆ ಬಟ್ಲಹಳ್ಳಿ ಠಾಣೆಗೆ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.