ADVERTISEMENT

ಚಿನ್ನ ಕಳವು: ಇಬ್ಬರ ಸೆರೆ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2020, 4:11 IST
Last Updated 20 ಡಿಸೆಂಬರ್ 2020, 4:11 IST

ಗೌರಿಬಿದನೂರು: ನಗರದ ಪ್ರಶಾಂತ ನಗರದ ನಿವಾಸಿ ಕೆ.ಎನ್. ಸತೀಶ್ ಅವರ ಮನೆಯಲ್ಲಿ ವರ್ಷದ ಹಿಂದೆ ನಡೆದ ಕಳವು ಪ್ರಕರಣ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ನೆರೆಯ ಹಿಂದೂಪುರ ನಗರದ ಶೇಖ್ ಇಲಿಯಾಜ್(33) ಮತ್ತು ಎಸ್.ನಿಜಾಂ (24) ಬಂಧಿತರು.

ಇವರು ನಗರದ ಪ್ರಶಾಂತ ನಗರದ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಸತೀಶ್ ಅವರ ಮನೆಯಲ್ಲಿ ಕಳವು ಮಾಡಿದ್ದರು. ಮನೆಯವರು ನೀಡಿದ ದೂರಿನ ಮೇರೆಗೆ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಹಿಂದೂಪುರದಲ್ಲಿದ್ದ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಸುಮಾರು ₹ 2.33 ಲಕ್ಷ ಮೌಲ್ಯದ 83.600 ಗ್ರಾಂ ಚಿನ್ನ ಕದ್ದಿರುವುದಾಗಿ ಒಪ್ಪಿಕೊಂಡಿದ್ದಾರೆ.

ADVERTISEMENT

ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ‌ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ‌ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.