ADVERTISEMENT

ಗೃಹಿಣಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2021, 3:17 IST
Last Updated 9 ಮಾರ್ಚ್ 2021, 3:17 IST
ಮೃತ ರಾಧಮ್ಮ
ಮೃತ ರಾಧಮ್ಮ   

ಗೌರಿಬಿದನೂರು: ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮಗುವಿನೊಂದಿಗೆ ತಾಯಿ ನೇಣಿಗೆ ಶರಣಾಗಿರುವ ಘಟನೆ ತಾಲ್ಲೂಕಿನ ಹುದೂತಿ ಗ್ರಾಮದಲ್ಲಿ ಸೋಮವಾರ ನಡೆದಿದೆ.

ರಾಧಮ್ಮ (29) ತನ್ನ ಎರಡುವರ್ಷದ ಹೆಣ್ಣು ಮಗುವಿನೊಂದಿಗೆ ನೇಣಿಗೆ ಶರಣಾಗಿದ್ದಾರೆ. ತಾಲ್ಲೂಕಿನ ಸೊನಗಾನಹಳ್ಳಿಯ ಅವರು ಕಳೆದ 4 ವರ್ಷಗಳ ಹಿಂದೆ ಮಂಜುನಾಥ್ ಎಂಬುವರೊಂದಿಗೆ ಮದುವೆಯಾಗಿದ್ದರು. ಈ ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸದ್ಯ ಮೃತ ಮಹಿಳೆಯ ಪತಿ ಹಾಗೂ ಅತ್ತೆಯನ್ನು ವಶಕ್ಕೆ ಪಡೆದುಕೊಂಡು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ಗೃಹಿಣಿಯು ವಿಶ್ವ ಮಹಿಳಾ ದಿನಾಚರಣೆಯಂದೇ ಆತ್ಮಹತ್ಯೆ ಮಾಡಿಕೊಂಡಿರುವುದು ದುರದೃಷ್ಟಕರ. ಸ್ಥಳಕ್ಕೆ ತಾಲ್ಲೂಕು ದಂಡಾಧಿಕಾರಿ ಎಚ್. ಶ್ರೀನಿವಾಸ್, ಚಿಕ್ಕಬಳ್ಳಾಪುರ ಉಪ ವಿಭಾಗಾಧಿಕಾರಿ ರವಿಶಂಕರ್, ಸಿಪಿಐ ಶಶಿಧರ್ ಹಾಗೂ ಪಿಎಸ್ಐ ಮೋಹನ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ
ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.