ADVERTISEMENT

ವಾಲ್ಮೀಕಿ ಜಯಂತಿ; ಮಕ್ಕಳಿಗೆ ರಸಪ್ರಶ್ನೆ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2021, 3:25 IST
Last Updated 22 ಅಕ್ಟೋಬರ್ 2021, 3:25 IST
ವಾಲ್ಮೀಕಿ ಜಯಂತಿ ಅಂಗವಾಗಿ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ನೀಡಲಾಯಿತು. ವಾಲ್ಮೀಕಿ ಮಹಾಸಭಾ ಯುವ ಘಟಕದ ಜಿಲ್ಲಾ ಅಧ್ಯಕ್ಷ ಮೂರ್ತಿ ಕುರ್ಲಹಳ್ಳಿ, ಮಂಜು, ನಾಗೇಶ್, ಕೃಷ್ಣ, ಅಂಜಿನಪ್ಪ, ಪೆದ್ದನ್ನ, ಲಕ್ಷ್ಮಿನರಸಿಂಹಪ್ಪ, ನಾರಾಯಣಸೂರಿ, ರಘು, ಗೇರಹಳ್ಳಿ ಮಂಜುನಾಥ್, ಶಿಕ್ಷಕರಾದ ವೆಂಕಟರೆಡ್ಡಿ, ಅರಸು, ರೆಡ್ಡಪ್ಪ ಇದ್ದರು
ವಾಲ್ಮೀಕಿ ಜಯಂತಿ ಅಂಗವಾಗಿ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ನೀಡಲಾಯಿತು. ವಾಲ್ಮೀಕಿ ಮಹಾಸಭಾ ಯುವ ಘಟಕದ ಜಿಲ್ಲಾ ಅಧ್ಯಕ್ಷ ಮೂರ್ತಿ ಕುರ್ಲಹಳ್ಳಿ, ಮಂಜು, ನಾಗೇಶ್, ಕೃಷ್ಣ, ಅಂಜಿನಪ್ಪ, ಪೆದ್ದನ್ನ, ಲಕ್ಷ್ಮಿನರಸಿಂಹಪ್ಪ, ನಾರಾಯಣಸೂರಿ, ರಘು, ಗೇರಹಳ್ಳಿ ಮಂಜುನಾಥ್, ಶಿಕ್ಷಕರಾದ ವೆಂಕಟರೆಡ್ಡಿ, ಅರಸು, ರೆಡ್ಡಪ್ಪ ಇದ್ದರು   

ಚಿಕ್ಕಬಳ್ಳಾಪುರ: ತಾಲ್ಲೂಕಿನ ಆವಲಗುರ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರ್ಲಹಳ್ಳಿ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.

ವಾಲ್ಮೀಕಿ ಅವರ ಆದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು. ವಾಲ್ಮೀಕಿ ಅವರು ಬರೆದ ರಾಮಾಯಣ ಮನುಕುಲಕ್ಕೆ ದಾರಿ ದೀಪವಾಗಲಿ ಎಂದು ಗಣ್ಯರು ಹೇಳಿದರು.

ಕಾರ್ಯಕ್ರಮದಲ್ಲಿ ಆವಲಗುರ್ಕಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿಜೇತ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಗಣ್ಯರಿಗೆ ಸನ್ಮಾನ ಮಾಡಲಾಯಿತು. ನಿವೃತ್ತ ಯೋಧ ಕುರ್ಲಹಳ್ಳಿ ಗ್ರಾಮದ ವೆಂಕಟರಮಣಪ್ಪ ಅವರನ್ನು ಸನ್ಮಾನಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.