ADVERTISEMENT

ಮತದಾನ ಕಡ್ಡಾಯ: ರವೀಂದ್ರ

​ಪ್ರಜಾವಾಣಿ ವಾರ್ತೆ
Published 26 ಜನವರಿ 2022, 3:15 IST
Last Updated 26 ಜನವರಿ 2022, 3:15 IST
ಗುಡಿಬಂಡೆಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಶಿಕ್ಷಣಾಧಿಕಾರಿ ಸಿದ್ದಪ್ಪ ಪ್ರತಿಜ್ಞಾ ವಿಧಿ ಬೋಧಿಸಿದರು
ಗುಡಿಬಂಡೆಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಶಿಕ್ಷಣಾಧಿಕಾರಿ ಸಿದ್ದಪ್ಪ ಪ್ರತಿಜ್ಞಾ ವಿಧಿ ಬೋಧಿಸಿದರು   

ಗುಡಿಬಂಡೆ: ‘ಭಾರತ ಪ್ರಪಂಚದಲ್ಲಿ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ರಚನೆಯಾದಂತಹ ರಾಷ್ಟ್ರ ಉಳಿಯಬೇಕಾದರೆ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು’ ಎಂದು ತಾ.ಪಂ. ಇಒ ರವೀಂದ್ರ ತಿಳಿಸಿದರು.

ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಿಕ್ಷಣಾಧಿಕಾರಿ ಸಿದ್ದಪ್ಪ ಮಾತನಾಡಿ, ಪ್ರಜಾಪ್ರಭುತ್ವ ಉಳಿಯಬೇಕಾದರೆ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಂದು ವೋಟಿಗೂ ಮೌಲ್ಯವಿದೆ. ಇದರಿಂದ ಯಾರು ಮತದಾನವನ್ನು ನಿರ್ಲಕ್ಷಿಸಬಾರದು ಎಂದು ಸಲಹೆ ನೀಡಿದರು.

ADVERTISEMENT

ಅಧಿಕಾರಿಗಳು ಮತ್ತು ಸಾರ್ವಜನಿಕರಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.