ಚಿಂತಾಮಣಿ: ಜೀವನದಲ್ಲಿ ಜಿಗುಪ್ಸೆಗೊಂಡು ವೈಜಕೂರು ಗ್ರಾಮದಮಧು(23) ಎಂಬಾತ ಲೈವ್ ವೀಡಿಯೋ ಮಾಡುತ್ತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇತ ಅಶ್ವತ್ಥಪ್ಪ ಎಂಬುವವರ ಮಗ.
ವಿಷ ಕುಡಿದು ರಕ್ತವನ್ನು ವಾಂತಿ ಮಾಡಿಕೊಳ್ಳುತ್ತ ತಂದೆಗೆ ಕ್ಷಮೆ ಕೇಳುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ‘ನಾನು ಯಾವುದೇ ತಪ್ಪು ಮಾಡಿಲ್ಲ, ಜೀವನದ ಬೇಸರದಿಂದ ಸಾಯಲು ನಿರ್ಧರಿಸಿ ವಿಷ ಕುಡಿದಿದ್ದೇನೆ. ನನ್ನನ್ನು ಕ್ಷಮಿಸಿ, ತಾಯಿ ಮತ್ತು ತಮ್ಮನನ್ನು ಚೆನ್ನಾಗಿ ನೋಡಿಕೊಳ್ಳಿ’ ಎಂದು ವಿಡಿಯೊದಲ್ಲಿ ಕೇಳಿಕೊಂಡಿದ್ದಾನೆ.
ಸಂಬಂಧಿಕರು ನೀಡಿದ ದೂರಿನ ಮೇಲೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.