ಶೃಂಗೇರಿ: ರಾಜ್ಯದ ಜನರ ಒಲವು ಜೆಡಿಎಸ್ ಪಕ್ಷದ ಕಡೆ ವಾಲುತ್ತಿದೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜನಪರ ಕಾಳಜಿ ಸರ್ವರಿಗೂ ಮಾದರಿಯಾಗಿದ್ದು, ಹಾಗಾಗಿ ಅವರು ಮುಂದಿನ ಮುಖ್ಯಮಂತ್ರಿ ಆಗುವ ಎಲ್ಲಾ ಮುನ್ಸೂಚನೆಗಳು ಎದ್ದು ಕಾಣುತ್ತಿದೆ ಎಂದು ಜೆಡಿಎಸ್ ಜಿಲ್ಲಾ ಉಸ್ತುವಾರಿ ಮುಖ್ಯಸ್ಥ ಎಚ್.ಜಿ.ವೆಂಕಟೇಶ್ ಅಭಿಪ್ರಾಯಪಟ್ಟರು.
ಶೃಂಗೇರಿ ತಾಲ್ಲೂಕಿನ ಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾನುವಾರ ತಾಲ್ಲೂಕು ಜೆಡಿಎಸ್ ಆಯೋಜಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ‘ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಮಾಜಿ ಮಂತ್ರಿ ಮಲೆನಾಡು ಗಾಂಧಿ ಗೋವಿಂದೇಗೌಡರ ಕಾರ್ಯ ವೈಖ್ಯರಿಯನ್ನು ಮೆಚ್ಚಿ ಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಂಬಳಕೆರೆ, ಶೀರ್ಲು ಹಾಗೂ ಎಲ್ಸಾರ್ ಗ್ರಾಮದ ಸುಮಾರು 60ಕ್ಕೂ ಹೆಚ್ಚು ಮಂದಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಜೆಡಿಎಸ್ ಕ್ಷೇತ್ರಾಧ್ಯಕ್ಷ ದಿವಾಕರ್ ಭಟ್, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಗಂಡಘಟ್ಟ ಮಂಜುನಾಥ್, ಜೆಡಿಎಸ್ ಮುಖಂಡರಾದ ಹೆಗ್ಗದ್ದೆ ಶಿವಾನಂದ ರಾವ್,,ಸಂಜಯ್,ಆಶೋಕ್,ರಹಮತ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.