ADVERTISEMENT

ಮರ್ಕಲ್ ಗ್ರಾ.ಪಂ: ಚುನಾವಣೆ ಬಹಿಷ್ಕಾರ ಬ್ಯಾನರ್ ಪತ್ತೆ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2013, 13:23 IST
Last Updated 19 ಏಪ್ರಿಲ್ 2013, 13:23 IST

ಶೃಂಗೇರಿ:  ತಾಲೂಕಿನ ಮರ್ಕಲ್ ಗ್ರಾಮ ಪಂಚಾಯತಿಯ ಹುಲ್ಸೆ ಸಮೀಪದ ಮಾವಿನಕಟ್ಟೆ ಎಂಬಲ್ಲಿ ಚುನಾವಣೆ ಬಹಿಷ್ಕಾರಕ್ಕೆ ಕರೆ ನೀಡಿರುವ ಬ್ಯಾನರ್ ಗುರುವಾರ ಮುಂಜಾನೆ ಪತ್ತೆಯಾಗಿದೆ. ರಸ್ತೆಗೆ ಅಡ್ಡಲಾಗಿ ಕಟ್ಟಿರುವ ಬ್ಯಾನರ್‌ನಲ್ಲಿ ಸಿಪಿಐ ಮಾವೋವಾದಿ ಎಂದು ಬರೆಯಲಾಗಿದ್ದು, ನಕ್ಸಲರು ಕಟ್ಟಿರಬಹುದೆಂದು ಶಂಕಿಸಲಾಗಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನ ಪ್ರದೇಶದ ಅಂಚಿನಲ್ಲಿರುವ ಮಾವಿನಕಟ್ಟೆ ಸುತ್ತಮುತ್ತಲ ಪ್ರದೇಶದಲ್ಲಿ ಈ ಹಿಂದೆ ಪರ್ಯಾಯ ಆಡಳಿತ ನಡೆಸುವಷ್ಟು ಪ್ರಬಲವಾಗಿದ್ದ ನಕ್ಸಲರ ಪ್ರಭಾವ ಇತ್ತೀಚಿನ ದಿನಗಳಲ್ಲಿ ಕ್ಷೀಣಿಸುತ್ತಾ ಬಂದಿತ್ತು. ಇದೀಗ ಪುನಃ ಬ್ಯಾನರ್ ಕಂಡು ಬಂದಿರುವುದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಘಟನೆ ನಡೆಸ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.