ADVERTISEMENT

ಮಲ್ಲೇದೇವರಹಳ್ಳಿ: ಸಂಭ್ರಮದ ಕೆಂಡೋತ್ಸವ

​ಪ್ರಜಾವಾಣಿ ವಾರ್ತೆ
Published 14 ಮೇ 2019, 15:31 IST
Last Updated 14 ಮೇ 2019, 15:31 IST
ಚಿಕ್ಕಮಗಳೂರು ತಾಲ್ಲೂಕಿನ ಮೆಣಸಿನ ಮಲ್ಲೇದೇವರಹಳ್ಳಿಯಲ್ಲಿ ಪಾರ್ವತಿ ಪರಮೇಶ್ವರ ಹಾಗೂ ಮಲ್ಲೇಶ್ವರ ಸ್ವಾಮಿಯ ಪಲ್ಲಕ್ಕಿ ಹೊತ್ತು ಭಕ್ತರು ಕೆಂಡ ಹಾಯ್ದರು.
ಚಿಕ್ಕಮಗಳೂರು ತಾಲ್ಲೂಕಿನ ಮೆಣಸಿನ ಮಲ್ಲೇದೇವರಹಳ್ಳಿಯಲ್ಲಿ ಪಾರ್ವತಿ ಪರಮೇಶ್ವರ ಹಾಗೂ ಮಲ್ಲೇಶ್ವರ ಸ್ವಾಮಿಯ ಪಲ್ಲಕ್ಕಿ ಹೊತ್ತು ಭಕ್ತರು ಕೆಂಡ ಹಾಯ್ದರು.   

ಚಿಕ್ಕಮಗಳೂರು: ತಾಲ್ಲೂಕಿನ ಮೆಣಸಿನ ಮಲ್ಲೇದೇವರಹಳ್ಳಿಯಲ್ಲಿ ಮಲ್ಲೇಶ್ವರಸ್ವಾಮಿ ಮತ್ತು ವೀರಭದ್ರೇಶ್ವರ ಸ್ವಾಮಿ ದೇವರ ಕೆಂಡೋತ್ಸವ ಮಂಗಳವಾರ ಶ್ರದ್ಧಾ, ಭಕ್ತಿಯಿಂದ ಜರುಗಿತು.

ಉತ್ಸವದ ನಿಮಿತ್ತ ಮಲ್ಲೇಶ್ವರಸ್ವಾಮಿ, ವೀರಭದ್ರೇಶ್ವರ ಸ್ವಾಮಿ ಮೂರ್ತಿಗಳಿಗೆ ರುದ್ರಾಭಿಷೇಕ, ವಿಶೇಷ ಅಲಂಕಾರ, ಪೂಜೆ ನಡೆಯಿತು. ನಂತರ ಅಡ್ಡಪಲ್ಲಕ್ಕಿಯಲ್ಲಿ ಪಾರ್ವತಿ ಪರಮೇಶ್ವರ ಹಾಗೂ ಮಲ್ಲೇಶ್ವರ ಸ್ವಾಮಿಯ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜಿಸಲಾಯಿತು.

ಗ್ರಾಮದ ಚಿಲುಮೆ ಬಾವಿಯ ಬಳಿಗೆ ಗ್ರಾಮೀಣ ವಾದ್ಯಗಳ ನಡುವೆ ಅಡ್ಡಪಲ್ಲಕ್ಕಿಯನ್ನು ಕೊಂಡೊಯ್ದು ಗಂಗಾಪೂಜೆ ನೆರವೇರಿಸಲಾಯಿತು. ಬಳಿಕ ಮಲ್ಲೇಶ್ವರಸ್ವಾಮಿ ದೇಗುಲದ ಮುಂಭಾಗ ಪಲ್ಲಕ್ಕಿ ಹೊತ್ತ ಭಕ್ತರು ಕೆಂಡದ ರಾಶಿ ಆಯ್ದರು. ಮಧ್ಯಾಹ್ನ ಗ್ರಾಮದಲ್ಲಿ ದುರ್ಗಾದೇವಿ ಪೂಜೆ, ಸಂಜೆ ಪಾರ್ವತಿ ಪರಮೇಶ್ವರರ ಕಲ್ಯಾಣೋತ್ಸವ, ಓಕಳಿ ಉತ್ಸವ ನಡೆಯಿತು.

ADVERTISEMENT

ಉತ್ಸವದ ಪ್ರಯುಕ್ತ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಸುತ್ತಲ ಗ್ರಾಮಗಳ ಸಹಸ್ರಾರು ಭಕ್ತರು ಉತ್ಸವದಲ್ಲಿ ಪಾಲ್ಗೊಂಡಿದ್ದರು.

ಗ್ರಾಮದ ಮುಖಂಡರಾದ ಎಂ.ಸಿ.ರುದ್ರಪ್ಪ, ಎಂ.ಉಮೇಶ್, ಪಂಚಾಕ್ಷರಿ, ಎಂ.ಬಿ.ಅಶೋಕ್‌ಕುಮಾರ್, ಚಂದ್ರಶೇಖರ್, ಭದ್ರಪ್ಪ, ಷಡಕ್ಷರಿ, ಚಂದ್ರಶೇಖರ್ ಗೇಟಿ, ಪ್ರಶಾಂತ್, ತೋಟಪ್ಪ, ರೇವಣ್ಣ, ವೀರಭದ್ರಪ್ಪ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.