ADVERTISEMENT

ಚಿಕ್ಕಮಗಳೂರು | 12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2023, 15:57 IST
Last Updated 11 ಜೂನ್ 2023, 15:57 IST
ನರಸಿಂಹರಾಜಪುರ ತಾಲ್ಲೂಕಿನ ಕಬ್ಬಿಣ ಸೇತುವೆ ಅರಳಿಕೊಪ್ಪ ಗ್ರಾಮದ ರಬ್ಬರ್ ತೋಟದಲ್ಲಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಉರುಗ ತಜ್ಞ ಬಿ.ಜಿ.ಹರೀಂದ್ರ ಸೆರೆ ಹಿಡಿದರು
ನರಸಿಂಹರಾಜಪುರ ತಾಲ್ಲೂಕಿನ ಕಬ್ಬಿಣ ಸೇತುವೆ ಅರಳಿಕೊಪ್ಪ ಗ್ರಾಮದ ರಬ್ಬರ್ ತೋಟದಲ್ಲಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ಉರುಗ ತಜ್ಞ ಬಿ.ಜಿ.ಹರೀಂದ್ರ ಸೆರೆ ಹಿಡಿದರು   

ನರಸಿಂಹರಾಜಪುರ: ತಾಲ್ಲೂಕಿನ ಕಬ್ಬಿಣ ಸೇತುವೆ ಸಮೀಪದ ಅರಳಿಕೊಪ್ಪ ಶಿವಪ್ರಸಾದ್ ಎಂಬುವರ ರಬ್ಬರ್ ತೋಟದಲ್ಲಿದ್ದ 13 ಅಡಿ ಉದ್ದದ ಗಂಡು ಕಾಳಿಂಗ ಸರ್ಪವನ್ನು ಉರುಗ ತಜ್ಞ ಬಿ.ಜಿ.ಹರೀಂದ್ರ ಸೆರೆಹಿಡಿದರು.

ಸೆರೆ ಹಿಡಿದ ಕಾಳಿಂಗ ಸರ್ಪವನ್ನು ಅರಣ್ಯಾಧಿಕಾರಿಗಳ ಸಮ್ಮುಖದಲ್ಲಿ ಸುರಕ್ಷಿತವಾಗಿ ಸೆರೆ ಹಿಡಿದು ಅಭಯಾರಣ್ಯಕ್ಕೆ ಬಿಟ್ಟರು. ಇದುವರೆಗೆ ಉರುಗ ತಜ್ಞ ಬಿ.ಜಿ.ಹರೀಂದ್ರ ಅವರು 300 ಕಾಳಿಂಗ ಸರ್ಪವನ್ನು ಸೆರೆ ಹಿಡಿದು ಸುರಕ್ಷಿತವಾಗಿ ಅಭಯಾರಣ್ಯಕ್ಕೆ ಬಿಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT