ADVERTISEMENT

ಲಂಚ; ಎಸಿಬಿ ಬಲೆಗೆ ಎಂಜಿನಿಯರ್‌ ಹನುಮಂತಯ್ಯ

​ಪ್ರಜಾವಾಣಿ ವಾರ್ತೆ
Published 9 ಮೇ 2019, 9:02 IST
Last Updated 9 ಮೇ 2019, 9:02 IST

ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ವಿಭಾಗದ(ಪಿಆರ್‌ಇಡಿ) ಕಾರ್ಯನಿರ್ವಾಹಕ ಎಂಜಿನಿಯರ್‌ ಹನುಮಂತಯ್ಯ (59) ಲಂಚ ಪಡೆಯುವಾಗ ಬುಧವಾರ ಎಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ರಸ್ತೆಯ ಕಾಮಗಾರಿ ಬಿಲ್‌ ಪಾಸ್ ಮಾಡಲು ಹನುಮಂತಯ್ಯ ಗುತ್ತಿಗೆದಾರನಿಗೆ ಲಂಚಕ್ಕೆ ₹ 20 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ₹ 10 ಸಾವಿರ ಪಡೆಯುವಾಗ ಪೊಲೀಸರಿಗೆ ಸಿಕ್ಕಿ ಬಿದಿದ್ದಾರೆ.

ಲಂಚಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಗುತ್ತಿಗೆದಾರ ಸತೀಶ್‌ ಎಂಬುವರು ಎಸಿಬಿಗೆ ದೂರು ನೀಡಿದ್ದರು. ಎಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಹನುಮಂತಯ್ಯನಿಂದ 2.75 ಲಕ್ಷ ನಗದು ವಶ ಪಡೆದಿದ್ದಾರೆ. ಆರೋಪಿಯ ವಿಚಾರಣೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.