ಚಿಕ್ಕಮಗಳೂರು:ತಾಲ್ಲೂಕಿನ ಲಕ್ಯಾ ಕ್ರಾಸ್ ಬಳಿ ಸೋಮವಾರ ಬೆಳಿಗ್ಗೆ 9ರ ಸುಮಾರಿಗೆ ಟ್ಯಾಂಕರ್ ಲಾರಿ ಮತ್ತು ಬೈಕ್ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಇಬ್ಬರು ಸಾವಿಗೀಡಾಗಿದ್ದಾರೆ.
ಲತಾ(26) ಮತ್ತು ಮನೋಜ್ (22) ಮೃತಪಟ್ಟವರು. ಇಬ್ಬರೂ ಎಸ್.ಬಿದರೆ ಗ್ರಾಮದವರು.
ಲತಾ ಅವರ ಪುತ್ರ ಅನ್ವಿತ್(2) ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಅಪಘಾತ ಸಂಭವಿಸಿದ ರಭಸಕ್ಕೆ ಬೈಕ್ ನಜ್ಜುಗುಜ್ಜಾಗಿದ್ದು, ಟ್ಯಾಂಕರ್ ಪಲ್ಟಿಯಾಗಿ, ಮೃತ ದೇಹಗಳು ಚಲ್ಲಾಪಿಲ್ಲಿಯಾಗಿ ಬಿದ್ದಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.