ADVERTISEMENT

ಬಸ್– ಕಾರು ಡಿಕ್ಕಿ: ನಾಲ್ವರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 6 ಜುಲೈ 2018, 14:48 IST
Last Updated 6 ಜುಲೈ 2018, 14:48 IST
ಬನ್ನೂರು- ಶಂಕರ್ ಪಾಲ್ಸ್ ನಡುವೆ ಶುಕ್ರವಾರ ಖಾಸಗಿ ಬಸ್ ಹಾಗೂ ಕಾರ್ ನಡುವೆ ಡಿಕ್ಕಿ ಸಂಭವಿಸಿದೆ. 
ಬನ್ನೂರು- ಶಂಕರ್ ಪಾಲ್ಸ್ ನಡುವೆ ಶುಕ್ರವಾರ ಖಾಸಗಿ ಬಸ್ ಹಾಗೂ ಕಾರ್ ನಡುವೆ ಡಿಕ್ಕಿ ಸಂಭವಿಸಿದೆ.    

ಆಲ್ದೂರು (ಬಾಳೆಹೊನ್ನೂರು): ಇಲ್ಲಿಗೆ ಸಮೀಪದ ಬನ್ನೂರು- ಶಂಕರ್ ಪಾಲ್ಸ್ ನಡುವೆ ಖಾಸಗಿ ಬಸ್ ಮತ್ತು ಕಾರು ನಡುವೆ ಶುಕ್ರವಾರ ಡಿಕ್ಕಿ ಸಂಭವಿಸಿದ ಕಾರಣ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.

ಮಡಿಕೇರಿ ಮೂಲದ ಕಾರು ಚಾಲಕನ ನಿಯಂತ್ರಣ ತಪ್ಪಿ ಬಾಳೆಹೊನ್ನೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿದ್ದು ಮೂವರನ್ನು ಚಿಕ್ಕಮಗಳೂರಿನ ಆಸ್ಪತ್ರೆಗೆ ಹಾಗೂ ಒಬ್ಬರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುಮಾರು ಒಂದು ಗಂಟೆಗಳ ಕಾಲ ಆಲ್ದೂರು-ಬಾಳೆಹೊನ್ನೂರು ನಡುವೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ವಾಹನ ಸವಾರರು ಪರದಾಡಿದರು. ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.