ADVERTISEMENT

ಬೀರೂರು ಸಮೀಪದ ದೋಗೆಹಳ್ಳಿ ಬಳಿ ಸೇತುವೆಗೆ ಟ್ಯಾಂಕರ್ ಲಾರಿ ಡಿಕ್ಕಿ: ಚಾಲಕ ಸಾವು

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2019, 10:05 IST
Last Updated 20 ಏಪ್ರಿಲ್ 2019, 10:05 IST

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಬೀರೂರು ಸಮೀಪದ ದೋಗೆಹಳ್ಳಿ ಬಳಿ ಸೇತುವೆಗೆ ಟ್ಯಾಂಕರ್ ಲಾರಿ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಚಾಲಕ ನಿಂಗರಾಜು ಮೃತಪಟ್ಟಿದ್ದಾರೆ.

ಬೆಳಿಗ್ಗೆ 10 ಗಂಟೆಗೆ ಸುಮಾರಿಗೆ ಅವಘಡ ಸಂಭವಿಸಿದೆ.ಚಾಲಕ ನಿಂಗರಾಜು ಹಾಸನದವರು.

ಟ್ಯಾಂಕರ್ ಲಾರಿ ಅಜ್ಜಂಪುರ ಕಡೆಯಿಂದ ಬೀರೂರು ಕಡೆಗೆ ಸಂಚರಿಸುತ್ತಿತ್ತು. ಬೀರೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.