ADVERTISEMENT

ಕೆಂಗೇನಹಳ್ಳಿ ಬಳಿ ಮರಕ್ಕೆ ಕಾರು ಗುದ್ದಿ ವ್ಯಕ್ತಿ ಸಾವು, ನಾಲ್ವರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 12 ಮೇ 2019, 14:28 IST
Last Updated 12 ಮೇ 2019, 14:28 IST
   

ಚಿಕ್ಕಮಗಳೂರು: ತಾಲ್ಲೂಕಿನ ಕೆಂಗೇನಹಳ್ಳಿ ಬಳಿ ಭಾನುವಾರ ಸಂಜೆಮರಕ್ಕೆ ಕಾರು ಗುದ್ದಿ ಕಾರಿನಲ್ಲಿದ್ದ ಒಬ್ಬರು ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ.

ಸಂಜೆ 6ಕ್ಕೆ ಅವಘಡ ಸಂಭವಿಸಿದೆ. ಚಿಕ್ಕಮಗಳೂರಿನ ಕೋಟೆ ನಿವಾಸಿ ಕಿಶೋರ್ (23) ಮೃತಪಟ್ಟವರು. ಕೋಟೆಯ ವಿನಯ್, ಮನು, ಸಂದೀಪ್, ರಾಹುಲ್ ಗಾಯಗೊಂಡವರು. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ರಾಹುಲ್ ಅವರ ಹೊಸ ಕಾರಿನಲ್ಲಿ ಐವರು ಕಡೂರು ಕಡೆಗೆ ತೆರಳುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಸಖರಾಯಪಟ್ಡಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.