ADVERTISEMENT

ಹೋಮ, ಹವನ ಮುಗಿಸಿ ಹಿಂದಿರುಗುವಾಗ ಸಿಎಂ ಬೆಂಗಾವಲು ವಾಹನ ಪಲ್ಟಿ: ಇಬ್ಬರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 4 ಮೇ 2019, 12:54 IST
Last Updated 4 ಮೇ 2019, 12:54 IST
   

ಚಿಕ್ಕಮಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬೆಂಗಾವಲು ವಾಹನ ತಾಲ್ಲೂಕಿನ ಆಲ್ದೂರು ಬಳಿಯ ಶಂಕರ್ ಫಾಲ್ಸ್ ಸಮೀಪ ಪಲ್ಟಿಯಾಗಿದ್ದು, ವಾಹನದಲ್ಲಿದ್ದ ಇನ್ ಸ್ಪೆಕ್ಟರ್ ಪ್ರದೀಪ್, ಚಾಲಕ ಗಾಯಗೊಂಡಿದ್ದಾರೆ.

ಸಂಜೆ 4.45ರ ಸುಮಾರಿಗೆ ಅವಘಡ ನಡೆದಿದೆ. ಇಬ್ಬರಿಗೂ ಸಣ್ಣಪುಟ್ಟ ಪೆಟ್ಟಾಗಿದೆ. ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಕುಟುಂಬದವರು ಕೊಪ್ಪ ತಾಲ್ಲೂಕಿನ ಕಮ್ಮರಡಿ ಬಳಿ ಕುಡಿನಲ್ಲಿಯ ಸಮೀಪ ತುಂಗಾ ತಟದಲ್ಲಿ ಉಮಾಮಹೇಶ್ವರ ದೇಗುಲದಲ್ಲಿ ಹೋಮ, ಹವನ ಕೈಂಕರ್ಯ ಮುಗಿಸಿಕೊಂಡು ವಾಪಸ್ ತೆರಳುವಾಗ, ಹಿಂಗಾವಲಿನಲ್ಲಿದ್ದ ಜೀಪು ಉರುಳಿಬಿದ್ದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.