ADVERTISEMENT

ಅಜ್ಜಂಪುರ: ಅಪಘಾತದಲ್ಲಿ ಮೆಸ್ಕಾಂ ಸಹಾಯಕ ಎಂಜಿನಿಯರ್ ಸಾವು

​ಪ್ರಜಾವಾಣಿ ವಾರ್ತೆ
Published 21 ಜನವರಿ 2023, 14:26 IST
Last Updated 21 ಜನವರಿ 2023, 14:26 IST
ಕಿರಣ್ ಕುಮಾರ್
ಕಿರಣ್ ಕುಮಾರ್   

ಅಜ್ಜಂಪುರ: ತಾಲ್ಲೂಕಿನ ಮಾಕನಹಳ್ಳಿ ಬಳಿ ಶನಿವಾರ ರಾತ್ರಿ ಕಾರು ಮರಕ್ಕೆ ಡಿಕ್ಕಿಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ಒಬ್ಬರು ಗಾಯಗೊಂಡಿದ್ದಾರೆ.

ತಾಲ್ಲೂಕಿನ ಶಿವನಿ ಗ್ರಾಮದ ಮೆಸ್ಕಾಂ ಸಹಾಯಕ ಎಂಜಿನಿಯರ್, ಚನ್ನರಾಯಪಟ್ಟಣ ತಾಲ್ಲೂಕು ಹಿರೇಸಾವೆ ಗ್ರಾಮದ ಕಿರಣ್ ಕುಮಾರ್(30), ಶಿವನಿ ಗ್ರಾಮದ ನಾಗರಾಜು (40) ಮೃತಪಟ್ಟವರು. ಸೊರಬ ಮೂಲದ ಸಚಿನ್ ಗಾಯಗೊಂಡಿದ್ದು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT