ADVERTISEMENT

ಅಮೃತ್ ಮಹಲ್ ಕೇಂದ್ರದಲ್ಲಿ ಉರುಳಿಸಿದ್ದ ಮರಗಳ ವಶ

​ಪ್ರಜಾವಾಣಿ ವಾರ್ತೆ
Published 20 ಜೂನ್ 2021, 1:23 IST
Last Updated 20 ಜೂನ್ 2021, 1:23 IST
ಅಜ್ಜಂಪುರ ಅಮೃತ್ ಮಹಲ್ ಕೇಂದ್ರದಲ್ಲಿ ಕಟಾವು ಮಾಡಿದ್ದ ಮರಗಳನ್ನು ಅರಣ್ಯಾಧಿಕಾರಿ ಮಹೇಶ್ ನಾಯಕ್ ಶನಿವಾರ ಇಲಾಖಾ ವಶಕ್ಕೆ ಪಡೆದರು.
ಅಜ್ಜಂಪುರ ಅಮೃತ್ ಮಹಲ್ ಕೇಂದ್ರದಲ್ಲಿ ಕಟಾವು ಮಾಡಿದ್ದ ಮರಗಳನ್ನು ಅರಣ್ಯಾಧಿಕಾರಿ ಮಹೇಶ್ ನಾಯಕ್ ಶನಿವಾರ ಇಲಾಖಾ ವಶಕ್ಕೆ ಪಡೆದರು.   

ಅಜ್ಜಂಪುರ: ಪಟ್ಟಣದ ಅಮೃತ್ ಮಹಲ್ ಕೇಂದ್ರದಲ್ಲಿ ಉರುಳಿಸಿದ್ದ ಮರಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಶನಿವಾರ ವಶಕ್ಕೆ ಪಡೆದರು.

ಅರಣ್ಯಾಧಿಕಾರಿ ಮಹೇಶ್ ನಾಯಕ್ ಸ್ಥಳಕ್ಕೆ ಭೇಟಿ ನೀಡಿದರು. ಉರುಳಿದ್ದ ಮರ ಪರಿಶೀಲಿಸಿ ದರು. ಕಟಾವಾಗಿದ್ದ ಮರಗಳನ್ನು ಇಲಾಖೆಯ ವಶಕ್ಕೆ ಪಡೆದರು.

‘ಇಲಾಖೆಯಿಂದ ಅನುಮತಿ ಪಡೆಯದೆ ಮರ ತೆರವುಗೊಳಿಸಿದ್ದ ಕೇಂದ್ರದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು’ ಎಂದು ಅವರು ತಿಳಿಸಿದರು.

ADVERTISEMENT

ಅಮೃತ್ ಮಹಲ್ ಕೇಂದ್ರದಲ್ಲಿ ಅಧಿಕಾರಿಗಳೇ ಮುಂದೆ ನಿಂತು ಕೆಲವು ಮರಗಳನ್ನು ನೆಲಕ್ಕುರುಳಿಸಿದ್ದರು. ಈ ಬಗ್ಗೆ ‘ಪ್ರಜಾವಾಣಿ’ ಶನಿವಾರ ‘ಅಮೃತ್ ಮಹಲ್ ಕೇಂದ್ರದಲ್ಲಿ ಮರಗಳ ಹನನ’ ತಲೆಬರಹದಡಿ ವರದಿ ಪ್ರಕಟವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.