ADVERTISEMENT

ಸಖರಾಯಪಟ್ಟಣ: ಶ್ರೀಬಲ್ಲಾಳೇಶ್ವರ ಸ್ವಾಮಿಗೆ ವಿಶೇಷ ಪೂಜೆ, ಅನ್ನ ಸಂತರ್ಪಣೆ

​ಪ್ರಜಾವಾಣಿ ವಾರ್ತೆ
Published 22 ಜುಲೈ 2025, 4:15 IST
Last Updated 22 ಜುಲೈ 2025, 4:15 IST
 ಕಡೂರು ತಾಲ್ಲೂಕು ಸಖರಾಯಪಟ್ಟಣದ ಶ್ರೀಬಲ್ಲಾಳೇಶ್ವರ ಸ್ವಾಮಿಗೆ ವಿಶೇಷಪೂಜೆ ಅಂಗವಾಗಿ ಸೋಮವಾರ ಅಲಂಕರಿಸಲಾಗಿತ್ತು.
 ಕಡೂರು ತಾಲ್ಲೂಕು ಸಖರಾಯಪಟ್ಟಣದ ಶ್ರೀಬಲ್ಲಾಳೇಶ್ವರ ಸ್ವಾಮಿಗೆ ವಿಶೇಷಪೂಜೆ ಅಂಗವಾಗಿ ಸೋಮವಾರ ಅಲಂಕರಿಸಲಾಗಿತ್ತು.   

ಕಡೂರು: ತಾಲ್ಲೂಕಿನ ಸಖರಾಯಪಟ್ಟಣದ ಅಯ್ಯನಕೆರೆ ಬಳಿ ಇರುವ ಶ್ರೀ ಬಲ್ಲಾಳೇಶ್ವರ ಸ್ವಾಮಿಗೆ ಮಳೆಗಾಗಿ ಪ್ರಾರ್ಥಿಸುವ ವಿಶೇಷ ಪೂಜೆ ಸೋಮವಾರ ರುದ್ರಹೋಮ, ಅನ್ನಸಂತರ್ಪಣೆಯೊಂದಿಗೆ ಸಂಪನ್ನಗೊಂಡಿತು.

ಐದು ದಿನಗಳಿಂದ ನಡೆದ ಕಾರ್ಯಕ್ರಮಗಳಲ್ಲಿ ಗಣಪತಿಪೂಜೆ, ಗಂಗಾಪೂಜೆ, ಪುಣ್ಯಾಹ, ಗಣಪತಿಹೋಮ, ಚಂಡಿಕಾಹೋಮ, ಪರ್ಜನ್ಯಜಪ, ಕನ್ನಿಕಾಪೂಜೆ, ಸುಮಂಗಲಿ ಪೂಜೆ, ನವಗ್ರಹ ಹೋಮ, ಮೃತ್ಯುಂಜಯ ಹೋಮ,ಪರ್ಜನ್ಯ ಹೋಮ, ಲಕ್ಷ್ಮಿ ನಾರಾಯಣ ಹೃದಯ ಹೋಮ, ಮಹಾಸೌರ ಪಾರಾಯಣ, ಹೋಮ, ನಿರಂತರ ಶತ ರುದ್ರಾಭಿಷೇಕ ಕಾರ್ಯಕ್ರಮಗಳು ಮತ್ತು ವಿಶೇಷ ಅಲಂಕಾರ ಸೇವೆಗಳು ನಡೆದವು. ಸೋಮವಾರ ಧಾರ್ಮಿಕ ಕಾರ್ಯಕ್ರಮಗಳ ಮುಕ್ತಾಯ ಸಮಾರಂಭದಲ್ಲಿ ಸಕರಾಯಪಟ್ಟಣ ಮತ್ತು ಸುತ್ತಮುತ್ತಲ ಗ್ರಾಮಗಳ ನೂರಾರು ಭಕ್ತರು ಭಾಗವಹಿಸಿದ್ದರು.

 ಸಖರಾಯಪಟ್ಟಣದ ಬಲ್ಲಾಳೇಶ್ವರ ಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷಪೂಜೆಯ ನಂತರ ಅನ್ನಸಂತರ್ಪಣೆ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT