ADVERTISEMENT

ಕುದುರೆಮುಖ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಚಾರಣಕ್ಕೆ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 26 ಜುಲೈ 2023, 13:27 IST
Last Updated 26 ಜುಲೈ 2023, 13:27 IST
ಕುದುರೆಮುಖ ರಾಷ್ಟ್ರೀಯ ಉದ್ಯಾನ  –ಸಂಗ್ರಹ ಚಿತ್ರ
ಕುದುರೆಮುಖ ರಾಷ್ಟ್ರೀಯ ಉದ್ಯಾನ –ಸಂಗ್ರಹ ಚಿತ್ರ   

ಕಳಸ: ಸತತ ಮಳೆ ಕಾರಣಕ್ಕೆ ಕುದುರೆಮುಖ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಚಾರಣವನ್ನು ನಿರ್ಬಂಧಿಸಲಾಗಿದೆ ಎಂದು ಕುದುರೆಮುಖ ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಜ್ಯೋತಿ ಮೆಣಸಿನಕಾಯಿ ತಿಳಿಸಿದ್ದಾರೆ.

ಕುದುರೆಮುಖ ಗಿರಿಶಿಖರ ಮತ್ತು ಕುರಿಂಜಾಲು ಪರ್ವತಗಳಿಗೆ ಪ್ರವಾಸಿಗರು ತೆರಳುವುದನ್ನು ಸದ್ಯಕ್ಕೆ ನಿರ್ಬಂಧಿಸಲಾಗಿದೆ. ಶುಕ್ರವಾರದವರೆಗಿನ ಹವಾಮಾನ ಪರಿಗಣಿಸಿ ಆನಂತರ ಮತ್ತೆ ತೀರ್ಮಾನ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಕುದುರೆಮುಖ ಉದ್ಯಾನ ವ್ಯಾಪ್ತಿಯ ಜಲಪಾತಗಳು ಮತ್ತು ಗಿರಿಯಲ್ಲಿ ಪ್ರವಾಸಿಗರು ಮುಂಜಾಗ್ರತೆ ವಹಿಸದೆ ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇದೆ. ಆದ್ದರಿಂದ ಸದ್ಯಕ್ಕೆ ಪ್ರವಾಸ ಚಟುವಟಿಕೆ ನಿರ್ಬಂಧಿಸುವಂತೆ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.