ಚಿಕ್ಕಮಗಳೂರು: ನವದೆಹಲಿಯಲ್ಲಿ ಶುಕ್ರವಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ಕಚೇರಿ ಉದ್ಘಾಟನೆ ನೆರವೇರಿತು.
ಬಿಜೆಪಿಯ ಬಿ.ಎಲ್. ಸಂತೋಷ್, ಆರ್.ಅಶೋಕ್, ಲಕ್ಷ್ಮಣ ಸವದಿ ಮೊದಲಾದವರು ಪಾಲ್ಗೊಂಡಿದ್ದರು.
‘1988ರಲ್ಲಿ ಆಟೊ ಚಂದ್ರಣ್ಣ ಅವರು ಬಿಜೆಪಿ ಸದಸ್ಯನನ್ನಾಗಿ ಮಾಡಿದರು. ಈಗ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದೇನೆ.
ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಾಗರವಳ್ಳಿಯಿಂದ ಶುರುವಾದ ನನ್ನ ರಾಜಕೀಯ ಯಾನ ದೆಹಲಿವರೆಗೆ ತಲುಪಿದೆ. ಈ ಯಾನದಲ್ಲಿ ಅನೇಕರು ರಾಜಕೀಯದ ಸರಿತಪ್ಪುಗಳನ್ನು ಹೇಳಿಕೊಟ್ಟಿದ್ದಾರೆ. ದೆಹಲಿಯಲ್ಲಿ ಹೊಸ ರಾಜಕೀಯ ಯಾನವೊಂದು ಆರಂಭವಾಗುತ್ತಿರುವ ಈ ಸಮಯದಲ್ಲಿ ನನ್ನ ಭಾವ ಕಡಲಿನಲ್ಲಿ ಹಳೆಯ ನೆನಪಿನ ಹಾಯಿದೋಣಿಗಳು ತೇಲಿ ಹೋಗುತ್ತಿವೆ’ ಎಂದು ಸಿ.ಟಿ.ರವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.