ಚಿಕ್ಕಮಗಳೂರು: ಜಿಲ್ಲೆಯ ಏಕಮಾತ್ರ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಅವರನ್ನು ಸೆಳೆಯಲು ಬಿಜೆಪಿ ಮುಖಂಡರು ಪ್ರಯತ್ನಿಸಿದ್ದಾರೆ.
‘ಪ್ರಜಾವಾಣಿ’ಯೊಂದಿಗೆ ಬುಧವಾರ ಮಾತನಾಡಿದ ರಾಜೇಗೌಡ, ‘ಬಿಜೆಪಿಯ ಕೆಲ ಮುಖಂಡರು ದೂರವಾಣಿ ಮೂಲಕ ಸಂಪರ್ಕಿಸಿದರು. ಬಿಜೆಪಿ ಶಾಸಕ ಹರೀಶ್ ಪೂಂಜ ಅವರು ಮುಖತಃ ಭೇಟಿಯಾಗಿ ಮಾತನಾಡಿದರು’ ಎಂದು ತಿಳಿಸಿದರು.
‘ಕಾಂಗ್ರೆಸ್ ತೊರೆಯುವುದಿಲ್ಲ ಎಂದು ಬಿಜೆಪಿ ಮುಖಂಡರಿಗೆ ತಿಳಿಸಿದ್ದೇನೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.