ಚಿಕ್ಕಮಗಳೂರು: ಹೊಸ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು ನಾಗರಿಕರೊಬ್ಬರಿಂದ ₹ 8,000 ಲಂಚ ಪಡೆಯುವಾಗ ಮೆಸ್ಕಾಂ ಸಹಾಯಕ ಎಂಜಿನಿಯರ್ ರಾಘವೇಂದ್ರ ನಗರದ ಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ) ಅಧಿಕಾರಿಗಳ ಬಲೆಗೆ ಬುಧವಾರ ಬಿದ್ದಿದ್ದಾರೆ.
ನಗರದ ಆಜಾದ್ಪಾರ್ಕ್ ವೃತ್ತದ ಬಳಿಯ ಮೆಸ್ಕಾಂ ಕಚೇರಿಯ ಎಂಜಿನಿಯರ್ ರಾಘವೇಂದ್ರ ಹೊಸಕಟ್ಟಡಕ್ಕೆ ವಿದ್ಯುತ್ ಸಂಪರ್ಕ ನೀಡಲು ನಾಗರಿಕರೊಬ್ಬರಿಗೆ ₹ 8,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಬುಧವಾರ ಲಂಚ ಪಡೆಯುವಾಗ ಬಲೆಗೆ ಬಿದ್ದರು ಎಂದು ಎಸಿಬಿ ಪೊಲೀಸರು ತಿಳಿಸಿದ್ದಾರೆ.
ಲಂಚದ ಹಣ ವಸಪಡಿಸಿಕೊಳ್ಳಲಾಗಿದೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.