ADVERTISEMENT

ಚಿಕ್ಕಮಗಳೂರು | ಕಾರು ಪಲ್ಟಿ: ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 27 ಜೂನ್ 2020, 15:19 IST
Last Updated 27 ಜೂನ್ 2020, 15:19 IST
ಜಖಂಗೊಂಡಿರುವ ಕಾರು
ಜಖಂಗೊಂಡಿರುವ ಕಾರು   

ಚಿಕ್ಕಮಗಳೂರು: ತಾಲ್ಲೂಕಿನ ಕರ್ತಿಕೆರೆ ಬಳಿ ಶುಕ್ರವಾರ ತಡರಾತ್ರಿ ಕಾರು ಪಲ್ಟಿಯಾಗಿ ಇಬ್ಬರು ಮೃತಪಟ್ಟು, ಇನ್ನಿಬ್ಬರು ಗಾಯಗೊಂಡಿರುವ ಅವಘಡ ಸಂಭವಿಸಿದೆ.

ಬೆಂಗಳೂರಿನ ಮಂಜುನಾಥ್‌ (30), ಮುತ್ತುರಾಜ್‌ (28) ಮೃತಪಟ್ಟರು. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಅತಿವೇಗ, ಅಜಾಗರೂಕ ಚಾಲನೆಯಿಂದಾಗಿ ದುರ್ಘಟನೆನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.