ADVERTISEMENT

ಬಜರಂಗದಳದ ಮೂವರ ವಿರುದ್ಧ ಪ್ರಕರಣ ದಾಖಲು

ಕೂಲಿಕಾರನನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿ ಥಳಿತ

​ಪ್ರಜಾವಾಣಿ ವಾರ್ತೆ
Published 29 ಜನವರಿ 2023, 18:40 IST
Last Updated 29 ಜನವರಿ 2023, 18:40 IST
ಕೂಲಿಕಾರನನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿದ್ದ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
ಕೂಲಿಕಾರನನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿದ್ದ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.   

ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂಕಿನ ಮುದ್ರೆಮನೆ (ಬೇಲೂರು ರಸ್ತೆ) ಬಳಿ ಅಸ್ಸಾಂನ ಕೂಲಿಕಾರ ಗಾಜಿವುರ್‌ ರೆಹಮಾನ್‌ ಅವರು ಗೋಮಾಂಸ ಮಾರಾಟ ಮಾಡಿದ್ದಾರೆಂದು ಆರೋಪಿಸಲಾಗಿದೆ. ಅವರನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿ ಥಳಿಸಿದ ಪ್ರಕರಣದಲ್ಲಿ ಬಜರಂಗದಳದ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಗಾಜಿವುರ್‌ ಪತ್ನಿ ಅಲಿಸಾ ಅವರು ನಿತಿನ್‌, ಅಜಿತ್ ಹಾಗೂ ಮಧು ವಿರುದ್ಧ ದೂರು ನೀಡಿದ್ದಾರೆ. ಗಾಜಿವುರ್‌ನನ್ನು ಕಂಬಕ್ಕೆ ಕಟ್ಟಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

‘ಆರೋಪಿಗಳು ತಲೆಮರೆಸಿಕೊಂಡಿದ್ದಾರೆ, ಶೋಧ ನಡೆಯುತ್ತಿದೆ’ ಎಂದು ಗೋಣಿಬೀಡು ಠಾಣೆ ಪಿಎಸ್‌ಐ ಎಂ.ಆರ್‌. ಧನಂಜಯ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ಗಾಜಿವುರ್‌ ವಶಕ್ಕೆ: ತಾಲ್ಲೂಕಿನ ಮುದ್ರೆಮನೆ ಕಾಫಿ ಎಸ್ಟೇಟ್‌ನ ಕೂಲಿ ಲೈನ್‌ ಪ್ರದೇಶದಲ್ಲಿ ಗೋಮಾಂಸ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗಾಜಿವುರ್‌ ರೆಹಮಾನ್‌ನನ್ನು ವಶಕ್ಕೆ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.