ADVERTISEMENT

ಅಜ್ಜಂಪುರ: ಪತ್ರಕರ್ತರ ಭವನಕ್ಕೆ ಶೋಭಾ ಭೂಮಿಪೂಜೆ

​ಪ್ರಜಾವಾಣಿ ವಾರ್ತೆ
Published 17 ಜನವರಿ 2023, 8:21 IST
Last Updated 17 ಜನವರಿ 2023, 8:21 IST
ಅಜ್ಜಂಪುರದಲ್ಲಿ ತಾಲ್ಲೂಕು ಪತ್ರಕರ್ತರ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿದರು.
ಅಜ್ಜಂಪುರದಲ್ಲಿ ತಾಲ್ಲೂಕು ಪತ್ರಕರ್ತರ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿದರು.   

ಅಜ್ಜಂಪುರ: ಪಟ್ಟಣದಲ್ಲಿ ತಾಲ್ಲೂಕು ಪತ್ರಕರ್ತರ ಭವನ ನಿರ್ಮಾಣ ಕಾಮಗಾರಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭೂಮಿಪೂಜೆ ನೆರವೇರಿಸಿದರು.

ಶಾಸಕ ಡಿ.ಎಸ್. ಸುರೇಶ್, ಆಧುನಿಕ ವ್ಯವಸ್ಥೆಯಲ್ಲಿ ಸುದ್ದಿ-ಸಮಾಚಾರಗಳನ್ನು ವೇಗವಾಗಿ ತಲುಪಿಸುವ ಹೊಣೆಗಾರಿಕೆ ಪತ್ರಕರ್ತರ ಮೇಲಿದೆ. ಪತ್ರಕರ್ತರು ಒಂದೆಡೆ ಕುಳಿತು ಕೆಲಸ ನಿರ್ವಹಿಸಲು ಅಗತ್ಯವಿರುವ ಭವನ ನಿರ್ಮಾಣಕ್ಕೆ ಅನು ದಾನ ನೀಡಲಾಗುವುದು ಎಂದರು.

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಜಿ.ಎಂ.ರಾಜಶೇಖರ್, ₹ 95 ಲಕ್ಷ ವೆಚ್ಚದಲ್ಲಿ ಪತ್ರಿಕಾ ಭವನ ನಿರ್ಮಿಸಲು ಪತ್ರಕರ್ತರ ಸಂಘ ನಿರ್ಧರಿಸಿದೆ ಎಂದರು.

ADVERTISEMENT

ಇದೇ ವೇಳೆ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮಂಜು ಎಂ. ಹೊಸಹಳ್ಳಿ ಭವನ ನಿರ್ಮಾಣಕ್ಕೆ ಅನುದಾನ ನೀಡುವಂತೆ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಶಾಸಕ ಡಿ.ಎಸ್. ಸುರೇಶ್ ಅವರಿಗೆ ಮನವಿ ಸಲ್ಲಿಸಿದರು.

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗರತ್ನಾ, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಆರ್.ಆನಂದಪ್ಪ, ಪಂಚಾಯಿತಿ ಮಾಜಿ ಅಧ್ಯಕ್ಷೆ ಅನ್ನಪೂರ್ಣಮ್ಮ, ಕಾಂಗ್ರೆಸ್ ಕಿಸಾನ್ ಸೆಲ್ ಅಧ್ಯಕ್ಷೆ ಸಿದ್ದೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.