ADVERTISEMENT

ಹುಬ್ಬಳ್ಳಿ ಗಲಭೆ | ಯಾವ ಅಮಾಯಕರನ್ನೂ ಬಂಧಿಸಿಲ್ಲ ಎಂದ ಮುಖ್ಯಮಂತ್ರಿ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2022, 6:09 IST
Last Updated 19 ಏಪ್ರಿಲ್ 2022, 6:09 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಚಿಕ್ಕಮಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವ ಅಮಾಯಕರನ್ನೂ ಬಂಧಿಸಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದರು.

ಶೃಂಗೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಪ್ರಕರಣದ ತನಿಖೆ ನಡೆಯುತ್ತಿದೆ. ಸಾಕ್ಷ್ಯಾಧಾರ ಪರಿಗಣಿಸಿ ಪೊಲೀಸರು ಕ್ರಮ ವಹಿಸುತ್ತಿದ್ದಾರೆ. ಈ ಹಂತದಲ್ಲಿ ಪ್ರಕರಣದ ಬಗ್ಗೆ ಪದೇಪದೇ ಹೇಳಿಕೆ ನೀಡುವುದು, ವ್ಯಾಖ್ಯಾನ ಮಾಡುವುದು ಸರಿಯಲ್ಲ' ಎಂದು ಉತ್ತರಿಸಿದರು.

'ಮುಖ್ಯಮಂತ್ರಿಯಾದ ನಂತರ ಜಿಲ್ಲೆಗೆ ಮೊದಲ ಭೇಟಿ ಇದು. ಈ ಹಿಂದೆ ಎರಡು ಬಾರಿ ನಿಗದಿಯಾಗಿದ್ದ ಭೇಟಿ ಕಾರ್ಯಕ್ರಮ ಕಾರಣಾಂತರಗಳಿಂದ ರದ್ದಾಗಿತ್ತು. ನಾಡಿನಲ್ಲಿ ಸಮೃದ್ಧಿ ನೆಲೆಸುವಂತೆ ಮಾಡು ಎಂದು ಶಾರದಾಂಬೆಯಲ್ಲಿ ಪ್ರಾರ್ಥಿಸುತ್ತೇನೆ' ಎಂದರು.

ಶಾರದಾಂಬೆ ದರ್ಶನ ಪಡೆಯಲು ಶೃಂಗೇರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.