ADVERTISEMENT

ಒಬ್ಬರಿಗೆ ಸೋಂಕು ಪತ್ತೆ; ಒಬ್ಬರು ಗುಣಮುಖ

ಕಾಫಿನಾಡು: ಸಕ್ರಿಯ ಪ್ರಕರಣ ಸಂಖ್ಯೆ 41

​ಪ್ರಜಾವಾಣಿ ವಾರ್ತೆ
Published 2 ಜುಲೈ 2020, 16:22 IST
Last Updated 2 ಜುಲೈ 2020, 16:22 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಗುರುವಾರ ಒಬ್ಬರಿಗೆ ಕೋವಿಡ್‌–19 ದೃಢಪಟ್ಟಿದೆ, ಒಬ್ಬರು ಗುಣಮುಖರಾಗಿದ್ದು ಬಿಡುಗಡೆ ಮಾಡಲಾಗಿದೆ. 41 ಸಕ್ರಿಯ ಪ್ರಕರಣಗಳು ಇವೆ.

ಕಡೂರು ತಾಲ್ಲೂಕಿನ 19 ವರ್ಷದ ಪುರುಷಗೆ (ಪಿ–16583) ಸೋಂಕು ಪತ್ತೆಯಾಗಿದೆ. ಸೋಂಕು ದೃಢಪಟ್ಟು ಶಿವಮೊಗ್ಗದ ಆಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟ ಕಡೂರಿನ ವ್ಯಕ್ತಿಯ (ಪಿ–14399) ಪುತ್ರ ಈತ.

28 ವರ್ಷದ ಪುರುಷ (ಪಿ–9759) ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ADVERTISEMENT

335 ಮಾದರಿ ಪರೀಕ್ಷೆಗೆ ರವಾನೆ

ಕೊರೊನಾ ವೈರಾಣು ಸೋಂಕು ಪತ್ತೆ ನಿಟ್ಟಿನಲ್ಲಿ 335 ಮಂದಿಯ ಗಂಟಲಿನ ದ್ರವ ಮತ್ತು ಮೂಗಿನ ದ್ರವ ಮಾದರಿಯನ್ನು ಗುರುವಾರ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.

13 ಮಾದರಿ ಪರೀಕ್ಷೆ ವರದಿ ಬಂದಿದ್ದು, ಸೋಂಕು ದೃಢಪಟ್ಟಿಲ್ಲ. 1620 ಮಂದಿಯ ವರದಿ ಬರಬೇಕಿದೆ. 334 ಮಂದಿಯನ್ನು ಪ್ರತ್ಯೇಕ ನಿಗಾ ವಾರ್ಡ್‌ಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಚ್‌.ಕೆ.ಮಂಜುನಾಥ್‌ ತಿಳಿಸಿದ್ದಾರೆ.

ಪಟ್ಟಿ

ಚಿಕ್ಕಮಗಳೂರು ಕೊವಿಡ್‌–19 ಪ್ರಕರಣ ಅಂಕಿಅಂಶ

ಆರೋಗ್ಯ ತಪಾಸಣೆ: 335

ಹೋಂ ಕ್ವಾರಂಟೈನ್‌ ಇರುವವರು: 239

ಗುಣಮುಖ ಆದವರು: 36

ಮೃತಪಟ್ಟವರು: 01

ಹೋಂ ಕ್ವಾರಂಟೈನ್‌ ಪೂರ್ಣ:283

ಪರೀಕ್ಷೆಗೆ ಕಳಿಸಿದ ಮಾದರಿ: 8028

ವರದಿ ಪಾಸಿಟಿವ್‌: 80

ವರದಿ ನೆಗೆಟಿವ್‌: 6408

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.