ADVERTISEMENT

ಚಿಕ್ಕಮಗಳೂರು: ಸಿದ್ದರಾಮಯ್ಯ ಬೆಂಗಾವಲು ವಾಹನದ ಚಕ್ರ ಜಾಮ್‌, ಸಿಬ್ಬಂದಿಗೆ ಪೆಟ್ಟು

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2021, 11:41 IST
Last Updated 3 ಡಿಸೆಂಬರ್ 2021, 11:41 IST
   

ಚಿಕ್ಕಮಗಳೂರು:ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಗರದಲ್ಲಿ ಗ್ರಾಮ ಸ್ವರಾಜ್‌ ಸಮಾವೇಶ ಮುಗಿಸಿ ತೆರಳುತ್ತಿದ್ದ ವೇಳೆ ಅವರ ಬೆಂಗಾವಲು ವಾಹನದ ಚಕ್ರ ಜಾಮ್‌ ಆಗಿ ರಸ್ತೆ ಬದಿಗೆ ಜಾರಿದೆ. ಈ ವೇಳೆ ವಾಹನದಲ್ಲಿದ್ದ ಸಿಬ್ಬಂದಿಯೊಬ್ಬರಿಗೆ ಪೆಟ್ಟಾಗಿದೆ.

ತಾಲ್ಲೂಕಿನ ಮಲ್ಲೇನಹಳ್ಳಿ ಸಮೀಪ ಘಟನೆ ನಡೆದಿದೆ.

ಗಾಯಾಳುವನ್ನುಆಸ್ಪತ್ರೆಗೆ ಕರೆದೊಯ್ದ ಬಳಿಕೆ ಸಿದ್ದರಾಮಯ್ಯ ಅಲ್ಲಿಂದ ತೆರಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರೂಇದ್ದರು.

ADVERTISEMENT
ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.