ಚಿಕ್ಕಮಗಳೂರು: ಅಡುಗೆ ಅನಿಲ, ಅಡುಗೆ ಎಣ್ಣೆ, ಪೆಟ್ರೋಲ್, ವಿದ್ಯುತ್ ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ಜಿಲ್ಲಾ ಘಟಕದವರು ಪ್ರತಿಭಟನೆಯಲ್ಲಿ ತೊಡಗಿದ್ದಾರೆ.
ತಾಲ್ಲೂಕು ಕಚೇರಿ ಆವರಣದಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿ, ಎಲ್ ಪಿಜಿ ಸಿಲಿಂಡರ್ ಇಟ್ಟು ಪ್ರತಿಭಟನೆಯಲ್ಲಿ ತೊಡಗಿದ್ದಾರೆ.
ಪ್ರತಿಭಟನಾಕಾರರು ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಮುಖಂಡರಾದ ಬಿ.ಎಂ. ಸಂದೀಪ್, ಎಚ್.ಪಿ. ಮಂಜೇಗೌಡ,
ಎಚ್. ಎಚ್. ದೇವರಾಜ್, ಕೆ.ಮಹಮ್ಮದ್, ಜಮೀಲ್ ಅಹಮದ್, ಇತರರು ಪಾಲ್ಗೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.