ಚಿಕ್ಕಮಗಳೂರು: ಕೋವಿಡ್ ತಗುಲಿದ್ದ ಒಬ್ಬರು ಸಾವಿಗೀಡಾಗಿದ್ದಾರೆ. ಶುಕ್ರವಾರ 117 ಮಂದಿಗೆ ಸೋಂಕು ದೃಢಪಟ್ಟಿದೆ. 279 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಹೊಸದುರ್ಗದ 54 ವರ್ಷದ ಪುರುಷ ಮೃತಪಟ್ಟವರು.
ತಾಲ್ಲೂಕುವಾರು ಸೋಂಕಿತರ ಸಂಖ್ಯೆ: ತರೀಕೆರೆ– 43, ಚಿಕ್ಕಮಗಳೂರು– 33, ಕಡೂರು– 23, ಕೊಪ್ಪ– 10, ಮೂಡಿಗೆರೆ– 8 ಮಂದಿಗೆ ಸೋಂಕು ಪತ್ತೆಯಾಗಿದೆ.
ಚಿಕ್ಕಮಗಳೂರು, ಕಡೂರು, ತರೀಕೆರೆ ತಾಲ್ಲೂಕಿನಲ್ಲಿ ಪ್ರಕರಣಗಳು ಹೆಚ್ಚು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು 2,091 ನಿಯಂತ್ರಿತ ವಲಯಗಳು ಇವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.