ADVERTISEMENT

ಒಬ್ಬರು ಸಾವು; 61 ಮಂದಿಗೆ ದೃಢ

​ಪ್ರಜಾವಾಣಿ ವಾರ್ತೆ
Published 26 ಜುಲೈ 2020, 16:45 IST
Last Updated 26 ಜುಲೈ 2020, 16:45 IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೋವಿಡ್‌ನಿಂದಾಗಿ ಭಾನುವಾರ ಒಬ್ಬರು ಸಾವಿಗೀಡಾಗಿದ್ದಾರೆ. ಮೃತರ ಸಂಖ್ಯೆ 18ಕ್ಕೆ ಏರಿದೆ. 61 ಮಂದಿಗೆ ಕೋವಿಡ್‌ ದೃಢಪಟ್ಟಿದ್ದು, ಐವರು ಗುಣಮುಖರಾಗಿ ಕೋವಿಡ್‌ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕಡೂರಿನ 58 ವರ್ಷದ ಪುರುಷ ಮೃತಪಟ್ಟವರು. ತಾಲ್ಲೂಕುವಾರು ಚಿಕ್ಕಮಗಳೂರು– 18, ಕಡೂರು– 30, ತರೀಕೆರೆ–12 ಮೂಡಿಗೆರೆಯ ಒಬ್ಬರಿಗೆ ಸೋಂಕು ಪತ್ತೆಯಾಗಿದೆ. ಸೋಂಕಿತರನ್ನು ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಫಿನಾಡಿನಲ್ಲಿ ಸಕ್ರಿಯ ಪ್ರಕರಣಗಳು 278 ಇವೆ. ಈವರೆಗಿನ ಒಟ್ಟಾರೆ ಪ್ರಕರಣಗಳ ಸಂಖ್ಯೆ 677ಕ್ಕೆ ತಲುಪಿದೆ. ಈವರೆಗೆ 376 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.