ADVERTISEMENT

ಕಾಫಿನಾಡಿನ ಪ್ರವಾಸ ರದ್ದಿಗೆ ಡಿ.ಸಿ ಮನವಿ

​ಪ್ರಜಾವಾಣಿ ವಾರ್ತೆ
Published 29 ಜೂನ್ 2020, 19:30 IST
Last Updated 29 ಜೂನ್ 2020, 19:30 IST

ಚಿಕ್ಕಮಗಳೂರು: ‘ಕಾಫಿನಾಡಿಗೆ ಪ್ರವಾಸ ಕಾರ್ಯಕ್ರಮ ರೂಪಿಸಿಕೊಂಡಿರುವ ಪ್ರವಾಸಿಗರು ಸ್ವಯಂಪ್ರೇರಿತವಾಗಿ ರದ್ದು
ಪಡಿಸಿಕೊಳ್ಳಬೇಕು. ಕೋವಿಡ್‌–19 ಹರಡದಂತೆ ತಡೆಗಟ್ಟಲು ಸಹಕರಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಮನವಿ ಮಾಡಿದ್ದಾರೆ.

‘ಜಿಲ್ಲೆಯ ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿ, ಸೀತಾಳಯ್ಯನ ಗಿರಿ, ಇತರ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕೊರೊನಾ ತಲ್ಲಣದ ಪರಿಸ್ಥಿತಿ ಹತೋಟಿಗೆ ಬರುವವರೆಗೆ ಪ್ರವಾಸವನ್ನು ಮುಂದೂಡಬೇಕು’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT