ಚಿಕ್ಕಮಗಳೂರು: ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ಆಡಳಿತ ಮಂಡಳಿಯ 13 ನಿರ್ದೇಶಕ ಸ್ಥಾನಗಳಿಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳಲ್ಲಿ ನಾಲ್ವರ ನಾಮಪತ್ರಗಳು ತಿರಸ್ಕೃತವಾಗಿವೆ.
ನಾಮಪತ್ರಗಳ ಪರಿಶೀಲನೆ ಮಂಗಳವಾರ ನಡೆಯಿತು. ಕಡೂರು ತಾಲ್ಲೂಕು ಪ್ರಾಥಮಿಕ ಸಹಕಾರ ಸಂಘ (ಪ್ಯಾಕ್ಸ್) ಪರವಾಗಿ ಸಲ್ಲಿಸಿದ್ದ ಎಸ್.ವಿ.ಬಸವರಾಜಪ್ಪ, ಮೂಡಿಗೆರೆ ಪ್ಯಾಕ್ಸ್ ಪರವಾಗಿ ಸಲ್ಲಿಸಿದ್ದ ಕೆ.ಬಿ. ಶಿವರಾಜ್, ಇತರ ಸಹಕಾರ ಸಂಘಗಳ ಕ್ಷೇತ್ರದಿಂದ ಸಲ್ಲಿಸಿದ್ದ ಕೆ.ಆರ್. ಆನಂದಕುಮಾರ್ ಹಾಗೂ ಈ.ಆರ್. ಮಹೇಶ್ ಅವರ ನಾಮಪತ್ರ ತಿರಸ್ಕೃತವಾಗಿದೆ ಎಂದು ಚುನಾವಣಾಧಿಕಾರಿ ಡಾ.ಎಚ್.ಎಲ್.ನಾಗರಾಜ್ ತಿಳಿಸಿದ್ದಾರೆ.
ಒಟ್ಟು 29 ಮಂದಿ 43 ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ನಾಲ್ವರ ನಾಮಪತ್ರಗಳು ತಿರಸ್ಕೃತವಾಗಿವೆ.
ನಾಮಪತ್ರ ವಾಪಸ್ ಪಡೆಯಲು ಇದೇ 23ರಂದು ಮಧ್ಯಾಹ್ನ 3 ಗಂಟೆವರೆಗೆ ಅವಕಾಶ ಇದೆ. ನಂತರ ಅಂತಿಮವಾಗಿ ಕಣದಲ್ಲಿ ಉಳಿದಿರುವ ಅಭ್ಯರ್ಥಿಗಳ ಪಟ್ಟಿ, ಚಿಹ್ನೆ ಪ್ರಕಟಣೆ ಪ್ರಕ್ರಿಯೆ ನಡೆಯಲಿದೆ. ಇದೇ 29ಕ್ಕೆ ಚುನಾವಣೆ ನಿಗದಿಯಾಗಿದೆ. ಚುನಾವಣೆ ಕಾವು, ಕಸರತ್ತು ಜೋರಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.