ADVERTISEMENT

ಚಿಕ್ಕಮಗಳೂರು| ಡಿಸಿಸಿ ಬ್ಯಾಂಕ್ ಚುನಾವಣೆ: ಬಿಜೆಪಿ- ಜೆಡಿಎಸ್ ಮೈತ್ರಿ ಕೂಟಕ್ಕೆ ಜಯ

ಸಿ.ಟಿ.ರವಿ, ಎಸ್.ಎಲ್.ಭೋಜೇಗೌಡ ಗೆಲುವು: ಶಾಸಕ ಕೆ.ಎಸ್.ಆನಂದ್ ಸೋಲು

​ಪ್ರಜಾವಾಣಿ ವಾರ್ತೆ
Published 17 ಜನವರಿ 2026, 13:18 IST
Last Updated 17 ಜನವರಿ 2026, 13:18 IST
   

ಚಿಕ್ಕಮಗಳೂರು: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್(ಡಿಸಿಸಿ) ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಬೆಂಬಲಿತ ಅಭ್ಯರ್ಥಿಗಳು ಭಾರಿ ಗೆಲುವು ಸಾಧಿಸಿದ್ದಾರೆ.

ಚಿಕ್ಕಮಗಳೂರು ತಾಲ್ಲೂಕು ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಮತ್ತು ಎಸ್.ಎಲ್.ಭೋಜೇಗೌಡ ಜಯ ಸಾಧಿಸಿದರೆ,. ಜಿಲ್ಲೆಯ ಎಲ್ಲಾ ವ್ಯವಸಾಯೋತ್ಪನ್ನ ಸಹಕಾರ ಸಂಘಗಳ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಡೂರಿನ ಕಾಂಗ್ರೆಸ್ ಶಾಸಕ ಕೆ.ಎಸ್.ಆನಂದ್ ಸೋಲು ಕಂಡಿದ್ದಾರೆ.

ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಮುಖಂಡ(ಮಾಜಿ ಶಾಸಕ) ಎಂ.ಪಿ.ಕುಮಾರಸ್ವಾಮಿ ಕೂಡ ಸೋಲನುಭವಿಸಿದ್ದಾರೆ.

ADVERTISEMENT

ಕಾಂಗ್ರೆಸ್ ಶಾಸಕ ಕೆ.ಎಸ್.ಆನಂದ್ ಸೋಲು ಕಂಡಿದ್ದಾರೆ.

ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಮುಖಂಡ(ಮಾಜಿ ಶಾಸಕ) ಎಂ.ಪಿ.ಕುಮಾರಸ್ವಾಮಿ ಕೂಡ ಸೋಲನುಭವಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.