ADVERTISEMENT

ಚಿಕ್ಕಮಗಳೂರು: ಶಾಸಕರಿಂದ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆ

​ಪ್ರಜಾವಾಣಿ ವಾರ್ತೆ
Published 2 ಜೂನ್ 2023, 15:45 IST
Last Updated 2 ಜೂನ್ 2023, 15:45 IST
ಚಿಕ್ಕಮಗಳೂರು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಯೋಜನೆ ಫಲಾನುಭವಿಗಳಿಗೆ ಶಾಸಕ ಎಚ್‌.ಡಿ.ತಮ್ಮಯ್ಯ ಮಂಜೂರಾತಿ ಆದೇಶ ಪತ್ರ ನೀಡಿದರು. ತಹಶೀಲ್ದಾರ್ ವಿನಾಯಕ್ ಸಾಗರ್ ಇದ್ದರು 
ಚಿಕ್ಕಮಗಳೂರು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಯೋಜನೆ ಫಲಾನುಭವಿಗಳಿಗೆ ಶಾಸಕ ಎಚ್‌.ಡಿ.ತಮ್ಮಯ್ಯ ಮಂಜೂರಾತಿ ಆದೇಶ ಪತ್ರ ನೀಡಿದರು. ತಹಶೀಲ್ದಾರ್ ವಿನಾಯಕ್ ಸಾಗರ್ ಇದ್ದರು    

ಚಿಕ್ಕಮಗಳೂರು: ಇಲ್ಲಿನ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸರ್ಕಾರದ ವಿವಿಧ ಯೋಜನೆ ಫಲಾಭವಿಗಳಿಗೆ ಶಾಸಕ ಎಚ್‌.ಡಿ.ತಮ್ಮಯ್ಯ ಮಂಜೂರಾತಿ ಆದೇಶಪತ್ರವನ್ನು ವಿತರಿಸಿದರು.

ವಿಧವಾ ವೇತನ, ಅಂಕವಿಕಲ, ವೃದ್ಧಾಪ್ಯ ವೇತನ ಸಹಿತ ವಿವಿಧ ಯೋಜನೆಯ 40 ಫಲಾನುಭವಿಗಳಿಗೆ ಮಂಜೂರಾತಿ ಆದೇಶ ಪತ್ರ ನೀಡಿದರು. ಜತೆಗೆ ಸಿಡಿಲಿನಿಂದ ಮೃತಪಟ್ಟ ಜಾನುವಾರು ಮಾಲೀಕರಿಗೆ ಪರಿಹಾರದ ಚೆಕ್‌ ವಿತರಿಸಿದರು. ತಹಶೀಲ್ದಾರ್ ವಿನಾಯಕ್ ಸಾಗರ್, ಶಿರಸ್ತೇದಾರ್ ಐ.ಎಸ್.ಪ್ರಸನ್ನ, ಶ್ರೀನಿಧಿ, ಜ್ಯೋತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT