ADVERTISEMENT

ಚಿಕ್ಕಮಗಳೂರು: ಭದ್ರಾ ನದಿಯಲ್ಲಿ ನೀರುಪಾಲಾಗಿದ್ದ ವೈದ್ಯ ರುದ್ರೇಶ್‌ ಶವ ಪತ್ತೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2021, 7:39 IST
Last Updated 4 ಆಗಸ್ಟ್ 2021, 7:39 IST
   

ಚಿಕ್ಕಮಗಳೂರು: ಜಿಲ್ಲೆಯ ಕಳಸ ಬಳಿ ಭದ್ರಾ ನದಿಯಲ್ಲಿ ಇದೇ 1ರಂದು ನೀರುಪಾಲಾಗಿದ್ದ ಬೆಂಗಳೂರಿನ ವೈದ್ಯ ಡಾ.ರುದ್ರೇಶ್‌ (35) ಅವರ ಮೃತದೇಹ ಪತ್ತೆಯಾಗಿದೆ.

ಹಳುವಳ್ಳಿ ಸಮೀಪ ನದಿಯಲ್ಲಿ ಬುಧವಾರಮೃತದೇಹ ಸಿಕ್ಕಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್‌) ತಂಡ, ಕುಶಾಲನಗರದ ಪೊಲೀಸರು, ಸ್ಥಳೀಯರು ಸತತ ಮೂರು ದಿನ ಕಾರ್ಯಾಚರಣೆ ನಡೆಸಿ ಶವ ಪತ್ತೆ ಮಾಡಿದ್ದಾರೆ.

‘ರುದ್ರೇಶ್‌ ಅವರು ಕೆಂಗೇರಿಯವರು. ಸ್ನೇಹಿತರೊಂದಿಗೆ ಜಿಲ್ಲೆಗೆ ಪ್ರವಾಸಕ್ಕೆ ಬಂದಿದ್ದರು. ನದಿ ಬಳಿ ತೆರಳುವಾಗ ನೀರು ಪಾಲಾಗಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

ಕಳಸ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.