ADVERTISEMENT

ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆಗೆ ಮದ್ಯ ಸೇವಿಸಿ ಬಂದ ವೈದ್ಯ! ಆರೋಪ

ಕಳಸದ ಸರ್ಕಾರಿ ಸಮುದಾಯ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಬಂದಿದ್ದ ವೈದ್ಯ ಬಾಲಕೃಷ್ಣ, ಮದ್ಯ ಸೇವಿಸಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಅರೋಗ್ಯ ಇಲಾಖೆ ವರದಿ ಕೇಳಿದೆ.

​ಪ್ರಜಾವಾಣಿ ವಾರ್ತೆ
Published 2 ಜೂನ್ 2023, 7:15 IST
Last Updated 2 ಜೂನ್ 2023, 7:15 IST
ವೈದ್ಯ ಬಾಲಕೃಷ್ಣ (ಮಲಗಿದವರು)
ವೈದ್ಯ ಬಾಲಕೃಷ್ಣ (ಮಲಗಿದವರು)   

ಕಳಸ/ಚಿಕ್ಕಮಗಳೂರು: ಕಳಸದ ಸರ್ಕಾರಿ ಸಮುದಾಯ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಬಂದಿದ್ದ ವೈದ್ಯ ಬಾಲಕೃಷ್ಣ, ಮದ್ಯ ಸೇವಿಸಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಅರೋಗ್ಯ ಇಲಾಖೆ ಆಯುಕ್ತಾಲಯ ವರದಿ ಕೇಳಿದೆ.

‘ಪಾನಮತ್ತರಾಗಿ ಶಸ್ತ್ರಚಿಕಿತ್ಸೆಗೆ ಬಂದಿದ್ದರು. ಅದನ್ನು ಮುಚ್ಚಿಡಲು ಎದೆನೋವಿನಿಂದ ಬಳಲುತ್ತಿದ್ದಾರೆ ಎಂದು ಬೇರೆ ವೈದ್ಯರು ಸುಳ್ಳು ಹೇಳುತ್ತಿದ್ದಾರೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಲಾಗುತ್ತಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎನ್.ಉಮೇಶ್‌ ‘ಪ್ರಜಾವಾಣಿ’ ಗೆ ತಿಳಿಸಿದರು.

‘ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಂದು ಮಾಹಿತಿ ಸಂಗ್ರಹಿಸುತ್ತಿದ್ದೇನೆ. ಆ ಸಂದರ್ಭದಲ್ಲಿ ಇದ್ದ ವೈದ್ಯರ ಹೇಳಿಕೆಗಳನ್ನು ಪಡೆದುಕೊಂಡಿದ್ದೇನೆ. ತನಿಖೆ ಪೂರ್ಣಗೊಂಡ ಬಳಿಕ ಆಯುಕ್ತರಿಗೆ ವರದಿ ಸಲ್ಲಿಸುತ್ತೇನೆ’ ಎಂದು ಹೇಳಿದರು.

ADVERTISEMENT

ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆಗೆಂದು ಬುಧವಾರ ಹಲವು ಮಹಿಳೆಯರು ಬಂದಿದ್ದರು. ಶೃಂಗೇರಿಯಿಂದ ಬಂದಿದ್ದ ವೈದ್ಯ ಬಾಲಕೃಷ್ಣ ಅವರು ಶಸ್ತ್ರಚಿಕಿತ್ಸೆ ಮಾಡಲು ಅಸಮರ್ಥರಾಗಿದ್ದರಿಂದ ಶಸ್ತ್ರಚಿಕಿತ್ಸೆ ರದ್ದಾಗಿತ್ತು. ಗುರುವಾರ ಚಿಕ್ಕಮಗಳೂರಿನಿಂದ ಬೇರೆ ವೈದ್ಯರನ್ನು ಕರೆಯಿಸಿ ಮಹಿಳೆಯರಿಗೆ ಶಸ್ತ್ರಚಿಕಿತ್ಸೆ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.