ಚಿಕ್ಕಮಗಳೂರು: ಕೋವಿಡ್ ಸೋಂಕಿತರ ಸಂಖ್ಯೆಹೆಚ್ಚುತ್ತಿರುವ ನಿಟ್ಟಿನಲ್ಲಿ ಇದೇ 21ರಿಂದ ಮೇ 4 ರವರೆಗೆ ಹೊರನಾಡಿನ ಅನ್ನಪೂರ್ಣೇಶ್ವರಿ ದೇಗುಲಕ್ಕೆ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ದೇವರ ದರ್ಶನ, ಪೂಜೆ, ಪ್ರಸಾದ ಮತ್ತು ವಸತಿ ಎಲ್ಲದಕ್ಕೂ ಭಕ್ತರಿಗೆ ನಿರ್ಬಂಧ ಹೇರಲಾಗಿದೆ.
ದೇವಿ ಮಂಗಳಾರತಿಯ ನೇರಪ್ರಸಾರವನ್ನು 'ಯೂಟ್ಯೂಬ್' ನಲ್ಲಿ ವೀಕ್ಷಿಸಬಹುದು ಎಂದು ಕ್ಷೇತ್ರದ ಧರ್ಮದರ್ಶಿ ಜಿ.ಭೀಮೇಶ್ವರ ಜೋಶಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.