ಬಾಳೆಹೊನ್ನೂರು: ಇಲ್ಲಿಗೆ ಸಮೀಪದ ಖಾಂಡ್ಯ ಹೋಬಳಿಯಲ್ಲಿ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಬಹಿಷ್ಕರಿಸುವ ಕುರಿತ ಬ್ಯಾನರ್ಗಳನ್ನು ಹಾಕಲಾಗಿದೆ.
ಕಸ್ತೂರಿ ರಂಗನ್ ವರದಿ, ಪರಿಸರ ಸೂಕ್ಷ್ಮ ವಲಯ, ಹುಲಿ ಯೋಜನೆ ವಿರೋಧಿಸಿ ಖಾಂಡ್ಯ ಹೋಬಳಿ ನಾಗರಿಕ ರಕ್ಷಣಾ ವೇದಿಕೆ, ಸರ್ವಪಕ್ಷ ಹಾಗೂ ಸಮಸ್ತರ ವತಿಯಿಂದ ಹೋಬಳಿಯ 22 ಬೂತ್ಗಳಲ್ಲಿ ಚುನಾವಣಾ ಬಹಿಷ್ಕಾರ ಕರೆ ನೀಡುವ ಬ್ಯಾನರ್ ಅಳವಡಿಸಲಾಗಿದೆ.
ಬಹಿಷ್ಕಾರದ ಕುರಿತು ಮುಂದಿನ ಒಂದೆರಡು ದಿನಗಳಲ್ಲಿ ಅಧಿಕಾರಿಗಳಿಗೆ ಅಧಿಕೃತವಾಗಿ ಮನವಿ ನೀಡಲಾಗುತ್ತದೆ ಎಂದು ಸಂಘಟನೆಯ ಸದಸ್ಯರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.