
ಪ್ರಜಾವಾಣಿ ವಾರ್ತೆ
ಆನೆ (ಪ್ರಾತಿನಿಧಿಕ ಚಿತ್ರ)
ಆಲ್ದೂರು: ಮಲ್ಲಂದೂರು ಸಮೀಪದ ಜಾಗರ ಕೊಳಗಾಮೆ ಗ್ರಾಮದ ಆಶೀರ್ವಾದ್ ಎಸ್ಟೇಟ್ನಲ್ಲಿ ವಿದ್ಯುತ್ ತಂತಿ ತಗುಲಿ ಆನೆಯೊಂದು ಮಂಗಳವಾರ ಬೆಳಿಗ್ಗೆ ಮೃತಪಟ್ಟಿದೆ.
ಆಹಾರ ಹುಡುಕಿಕೊಂಡು ಬಂದಿದ್ದ ಆನೆ, ತೋಟದಲ್ಲಿ ಅಡಿಕೆ ಮರವೊಂದನ್ನು ಉರುಳಿಸಿದೆ. ಅದರ ಜತೆಗೆ ವಿದ್ಯುತ್ ತಂತಿ ನೆಲಕ್ಕೆ ಜಾರಿದೆ. ಅದು ಒಂಟಿ ಸಲಗಕ್ಕೆ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದೆ.
‘ಆನೆಗೆ 35 ವರ್ಷ ವಯಸ್ಸಿರಬಹುದು. ಮುತ್ತೋಡಿ ಭದ್ರಾ ಅಭಯಾರಣ್ಯದಿಂದ ಆಹಾರ ಹುಡುಕಿಕೊಂಡು ಬಂದಾಗ ಈ ಅವಘಡ ಸಂಭವಿಸಿದೆ’ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ಬಾಬು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.