ADVERTISEMENT

ತರೀಕೆರೆ: ವಿದ್ಯುತ್‌ ತಂತಿ ಸ್ಪರ್ಶಿಸಿ ಆನೆ ಸಾವು, ದೂರು ದಾಖಲು 

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2022, 15:32 IST
Last Updated 30 ನವೆಂಬರ್ 2022, 15:32 IST
ವಿದ್ಯುತ್‌ ತಂತಿ ಸ್ಪರ್ಶಿಸಿ ಆನೆ ಸಾವು
ವಿದ್ಯುತ್‌ ತಂತಿ ಸ್ಪರ್ಶಿಸಿ ಆನೆ ಸಾವು   

ಚಿಕ್ಕಮಗಳೂರು: ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಹೋಬಳಿಯ ನಂದಿಬಟ್ಟಲು ಬಳಿ ಜಮೀನಿನ ಪಕ್ಕದಲ್ಲಿ ಗಂಡಾನೆಯೊಂದು ಮೃತಪಟ್ಟಿದೆ.

ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಸಂಗೀತಾ, ಅರಣ್ಯ ಸಿಬ್ಬಂದಿ ಸ್ಥಳ ಪರಿಶೀಲನೆ ಮಾಡಿದ್ದಾರೆ. ಆನೆ ವಯಸ್ಸು ಸುಮಾರು 20 ವರ್ಷ ಎಂದು ಅಂದಾಜಿಸಲಾಗಿದೆ. ಲಿಂಗದಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

‘ಹೊಲದಲ್ಲಿ ಬೇಲಿಗೆ ಅಕ್ರಮವಾಗಿ ವಿದ್ಯುತ್‌ ಹರಿಸಲಾಗಿತ್ತು. ತಂತಿ ಸ್ಪರ್ಶಿಸಿ ಆನೆ ಮೃತಪಟ್ಟಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಜಮೀನಿನ ಮಾಲೀಕರ ವಿರುದ್ಧ ದೂರು ನೀಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.