ಕಡೂರು: ಅರಸೀಕೆರೆಯಲ್ಲಿ ಭೂಸೇನಾ ನಿಗಮದಲ್ಲಿ ಸಿವಿಲ್ ಎಂಜಿನಿಯರ್ ಆಗಿದ್ದ ವಿಶ್ವಾಸ್ (28) ಅವರು ಪಟ್ಟಣದ ಖಾಸಗಿ ವಸತಿ ಗೃಹವೊಂದರಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರು ಬುಧವಾರ ಕಡೂರಿಗೆ ಬಂದು, ಖಾಸಗಿ ವಸತಿಗೃಹದಲ್ಲಿ ಉಳಿದುಕೊಂಡು ರಾತ್ರಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
‘ತನ್ನ ಸಾವಿಗೆ ತಾನೇ ಕಾರಣ’ ಎಂದು ಬರೆದ ಡೆತ್ನೋಟ್ ವಸತಿಗೃಹದಲ್ಲಿ ದೊರೆತಿದೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.