ADVERTISEMENT

​ಚಿಕ್ಕಮಗಳೂರು: ಬೋನಿಗೆ ಬಿದ್ದ ಚಿರತೆ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2022, 5:33 IST
Last Updated 1 ಮಾರ್ಚ್ 2022, 5:33 IST
   

ಚಿಕ್ಕಮಗಳೂರು: ಜಿಲ್ಲೆಯ ಬೀರೂರಿನ ಅಮೃತ್ ಮಹಲ್ ತಳಿ ಸಂವರ್ಧನಾ ಕೇಂದ್ರದ ಆವರಣದಲ್ಲಿರುವಚೌಡೇಶ್ವರಿ ದೇಗುಲ ಸನಿಹ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.

ಕೇಂದ್ರದ ಸುತ್ತಮುತ್ತಲಿನ ಭಾಗದಲ್ಲಿ ಚಿರತೆ ಓಡಾಟದ ಬಗ್ಗೆ ಸಿಬ್ಬಂದಿ, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅರಣ್ಯ ಇಲಾಖೆಯವರು ವಾರದ ಹಿಂದೆ ಈ ಪ್ರದೇಶದಲ್ಲಿ ಬೋನು ಇಟ್ಟಿದ್ದರು.

ಉಪವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾರ್, ಹರೀಶ್ ಅವರು ಚಿರತೆ ಇದ್ದ ಬೋನನ್ನು ಕಡೂರಿಗೆ ಸಾಗಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.