ನರಸಿಂಹರಾಜಪುರ: ಕೋಟೆ ಮಾರಿಕಾಂಬ ಜಾತ್ರೆಯ ಕೊನೆಯ ದಿನವಾದ ಗುರುವಾರ ರಾತ್ರಿ ದೇವಿಯ ವಿಸರ್ಜನಾ ಮೆರವಣಿಗೆ ಸಂಪನ್ನಗೊಂಡಿತು.
ದೇವಿಯ ವಿಗ್ರಹವನ್ನು ರಾತ್ರಿ 11ರ ವೇಳೆಗೆ ಗ್ರಾಮ ದೇವತೆಗಳಾದ ಹಳೇಪೇಟೆ ಗುತ್ತ್ಯಮ್ಮ, ಮೇದರ ಬೀದಿ ಅಂತರಘಟ್ಟಮ್ಮ ಹಾಗೂ ಮಡಬೂರು ದಾನಿವಾಸ ದುರ್ಗಾಂಬ ದೇವತೆಗಳೊಂದಿಗೆ ಮೆರವಣಿಗೆಯ ಮೂಲಕ ಕೊಂಡೊಯ್ಯಲಾಯಿತು. ಚೌಡಿ ಗುಂಡಿಯ ಮುಂಭಾಗದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಹಳೆ ಶಿವಮೊಗ್ಗ ರಸ್ತೆಯ ಮಾರಿ ಬನದಲ್ಲಿ ದೇವಿಯನ್ನು ವಿಸರ್ಜಿಸಲಾಯಿತು.
ಕೋಟೆ ಮಾರಿಕಾಂಬ ಜಾತ್ರೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.