ADVERTISEMENT

ಸಾಮಾಜಿಕ ಮಾಧ್ಯಮದಲ್ಲಿ ‘ಗೋಬ್ಯಾಕ್‌ ಸಿದ್ದರಾಮಯ್ಯ’ ಪೋಸ್ಟ್‌

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2022, 17:09 IST
Last Updated 18 ಆಗಸ್ಟ್ 2022, 17:09 IST
ಸಿದ್ದರಾಮಯ್ಯ
ಸಿದ್ದರಾಮಯ್ಯ    

ಚಿಕ್ಕಮಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಕೊಪ್ಪ ಇತರ ಭಾಗಗಳಲ್ಲಿ ಮಳೆಹಾನಿ ಪ್ರದೇಶಗಳನ್ನು 19ರಂದು ವೀಕ್ಷಿಸಲಿದ್ದು, ಕೆಲ ವಿರೋಧಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ‘ಗೋ ಬ್ಯಾಕ್‌ ಸಿದ್ದರಾಮಯ್ಯ’ ಪೋಸ್ಟ್‌ ಹರಿಬಿಟ್ಟಿದ್ದಾರೆ.

ಫೇಸ್‌ಬುಕ್‌ ಮತ್ತು ವ್ಯಾಟ್ಸ್‌ ಆ್ಯಪ್‌ನಲ್ಲಿ ಪೋಸ್ಟ್‌ಗಳನ್ನು ಹಾಕಿದ್ದಾರೆ. ಸಿದ್ದರಾಮಯ್ಯ ಅವರು ಗುರುವಾರ ರಾತ್ರಿ ಜಿಲ್ಲೆಗೆ ತಲುಪಿದ್ದಾರೆ. ಅವರ ಭೇಟಿ ಹಿನ್ನೆಲೆ ಪೊಲೀಸ್‌ ಬಿಗಿ ಬಂದೋಬಸ್ತ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT